Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 8 ಮತ್ತು 15 ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

---Advertisement---

ಬೆಂಗಳೂರು, ಸೆಪ್ಟೆಂಬರ್ 6, 2024 : ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ಸೆ. 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ತಿಳಿಸಿದೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಈ ತಿಂಗಳ 8 ಮತ್ತು 15ರ ಭಾನುವಾರವೂ ತೆರೆಯಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಪೇಮೆಂಟ್‌ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್‌ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಈಗಾಗಲೇ ಕೋರಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.
ಗೃಹ ಜ್ಯೋತಿಯೋಜನೆ ಅಡಿಯಲ್ಲಿ ಶೂನ್ಯ ಬಿಲ್‌ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯ ವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟ ಪಡಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...