Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ನ್ಯಾಷನಲ್ ಆಂಗ್ಲ ಶಾಲೆಗೆ ಅತ್ಯುತ್ತಮ ಶ್ರೇಷ್ಠ ಶಾಲಾ ಆಡಳಿತ ಮತ್ತು ನಿರಂತರ ಸುಧಾರಣೆ ಪ್ರಶಸ್ತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ಚಿತ್ರದುರ್ಗದ ನ್ಯಾಷನಲ್ ಆಂಗ್ಲ ಶಾಲೆಗೆ ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಬೆಂಗಳೂರು ಇವರಿಂದ ಕೊಡಮಾಡುವ ಅತ್ಯುತ್ತಮ ಶ್ರೇಷ್ಠ ಶಾಲಾ ಆಡಳಿತ ಮತ್ತು ನಿರಂತರ ಸುಧಾರಣೆ ಪ್ರಶಸ್ತಿಯನ್ನು ನೀಡಲಾಯಿತು.

ಬೆಂಗಳೂರಿನ ಅರಮನೆ ರಸ್ತೆಯ ಬಳಿ ಇರುವ ಭಾರತೀಯ ಸ್ಕೌಟ್ಸ್ – ಗೈಡ್ಸ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಬೆಂಗಳೂರು ಇವರಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನ ರಹಿತ ಶಾಲೆಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಅತ್ಯುತ್ತಮ ಶ್ರೇಷ್ಠ ಶಾಲಾ ಆಡಳಿತ ಪ್ರಶಸ್ತಿಯನ್ನು ನೀಡಿದೆ.

ಕುಸುಮ- ಮಂಡಳಿಯು ರಾಜ್ಯಾದ್ಯಂತ ಸುಮಾರು 2500 ಶಾಲೆಗಳ ಸದಸ್ಯತ್ವವನ್ನು ಹೊಂದಿದ್ದು 2024-25ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಕಾರ್ಯಕ್ಷಮತೆಯನ್ನು ಗುರುತಿಸಿ ಅವರ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನ್ಯಾಷನಲ್ ಆಂಗ್ಲ ಶಾಲೆಗೆ ಅತ್ಯುತ್ತಮ ಶ್ರೇಷ್ಠ ಶಾಲಾ ಆಡಳಿತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾರತೀಯ ಸ್ಕೌಟ್ಸ್ – ಗೈಡ್ಸ್ ರಾಜ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ, ಭಾರತ ಸರ್ವೋಚ್ಛ ನ್ಯಾಯಾಲಯದ ಪೂರ್ವ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ , ಐ.ಪಿ.ಎಸ್ ಅಧಿಕಾರಿಯಾದ ರವಿ ಡಿ ಚನ್ನಣ್ಣನವರು ಮತ್ತು ಇತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ನ್ಯಾಷನಲ್ ಆಂಗ್ಲ ಶಾಲೆಯ ಕಾರ್ಯದರ್ಶಿ ಶ್ರೀಮತಿ ಸಯೀದಾ ನಾಜ್, ಆಡಳಿತಾಧಕಾರಿ ಅಕ್ತರ್ , ಶಾಲೆಯ ನಿರ್ದೇಶಕರಾದ ಸೈಯದ್ ಶುಜಾತ್ ಮತ್ತು ಶಾಲೆಯ ವ್ಯವಸ್ಥಾಪಕರಾದ ಮೊಹಮ್ಮದ್ ಇಮ್ರಾನ್ ಸೈಫ್ ಮತ್ತು ವಿದ್ಯಾ ವಿಕಾಸ ಶಾಲೆಯ ವಿಜಯಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು‌ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ)

ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ!

ಈ ರಾಶಿಯವರಿಗೆ ಕೈ ತುಂಬಾ ಹಣಪ್ರಾಪ್ತಿ. ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ! ಶನಿವಾರರಾಶಿ ಭವಿಷ್ಯ -ಸೆಪ್ಟೆಂಬರ್-28,2024 ಇಂದಿರಾ ಏಕಾದಶಿ ಸೂರ್ಯೋದಯ: 06:09, ಸೂರ್ಯಾಸ್ತ : 06:03 ಶಾಲಿವಾಹನ ಶಕೆ

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

error: Content is protected !!