Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ, ದಾವಣಗೆರೆ ಸೇರಿ ಹಲವು ಸರ್ಕಾರಿ ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ

---Advertisement---

 

 

ಬೆಂಗಳೂರು: ಮಿಷನ್ ಪ್ರಕೃತಿ.. ತರಗತಿಯಿಂದ ಸಂರಕ್ಷಣೆಯತ್ತ ಎಂಬ ಕಾರ್ಯಕ್ರಮದಲ್ಲಿ ರಾಜ್ಯದ 10 ಶಾಲೆಗಳು ಅತ್ಯುತ್ತಮ ಶಾಲೆಗಳು ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿವೆ. ಈ ಅತ್ಯುತ್ತಮ ಶಾಲೆಗಳಿಗೆ ಮಧು ಬಂಗಾರಪ್ಪ ಅವರು ಪ್ರಶಸ್ತಿಯನ್ನ ಪ್ರಧಾನ ಮಾಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನ ನೀಡಿ ಗೌರವಿಸಿದ್ದಾರೆ.

 

ಬಳ್ಳಾರಿಯ ಎಮ್ಮಿಗನೂರಿನಲ್ಲಿರುವ ಜೆ.ಎಂ.ಪಿ.ಎಚ್.ಎಸ್ ಶಾಲೆ, ಬೆಳಗಾವಿಯ ಕಾಗವಾಡದ ಕಾತ್ರಾಳ ಶಾಲೆ, ಚಿಕ್ಕಬಳ್ಳಾಪುರದ ಅಲಿಪುರದಲ್ಲಿರುವ ಶಾಲೆ, ದಾವಣಗೆರೆಯ ಹಿರೇಗೋಣಿಗೆರೆ ಶಾಲೆ, ಕಲಘಟಗಿಯ ಜೋಡಳ್ಳಿಯಲ್ಲಿರುವ ಶಾಲೆ, ಉಡುಪಿ, ಕುಂದಾಪುರದ ಕೋಟೇಶ್ವರದ ಶಾಲೆ, ದಕ್ಷಿಣ ಕನ್ನಡ ಜಿಲ್ಲೆಯ ಅಳಿಯೂರಿನಲ್ಲಿರುವ ಶಾಲೆ, ಉಡುಪಿ ಜಿಲ್ಲೆಯ ಬೈಂದೂರಿನ ಹಕ್ಲಾಡಿ ಶಾಲೆ, ಚಾಮರಾಜನಗರ ಜಿಲ್ಲೆಯ ಯಳಂದೂರು ಶಾಲೆ, ಉಡುಪಿಯ ಮಲ್ಲೂರು ಶಾಲೆಗೆ ಈ ಪ್ರಶಸ್ತಿಗಳು ಲಭಿಸಿವೆ.

ಇದೇ ವೇಳೆ ಸಂತಸವನ್ನು ಹೊರ ಹಾಕಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದಬಾರದು. ವಿಷಯವನ್ನ ಆಳವಾಗಿ ಅರ್ಥೈಸಿಕೊಳ್ಳುವುದರ ಕಡೆಗೆ ಗಮನ ಹರಿಸಬೇಕು. ಅರಿವು ಮೂಡಿದರೆ ಫಲಿತಾಂಶ ತಾನಾಗಿಯೇ ಉತ್ತಮವಾಗುತ್ತದೆ ಎಂದರು. ಜೊತೆಗೆ ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ನ ಉದಾಹರಣೆ ನೀಡುತ್ತಾ, ʻಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಾರೆ. ಅಂತಹ ಶಿಸ್ತು ನಮ್ಮಲ್ಲಿ ಬರಬೇಕು ಎಂದು ಕಿವಿಮಾತು ಹೇಳಿದ್ರು. ಮುಂದಿನ ವರ್ಷದಿಂದ 1-10ನೇ ತರಗತಿಯವರೆಗೆ ನೈತಿಕ ವಿಜ್ಞಾನವನ್ನು ಪರಿಚಯಿಸಲಾಗುವುದು. ಮಾನವೀಯ ಮೌಲ್ಯಗಳನ್ನ ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದು ಮಕ್ಕಳಿಗೆ ಆತ್ಮವಿಶ್ವಾಸ ತುಂಬಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...