Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾಮೇಲ್ದಂಡೆ ಯೋಜನೆ | ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ | ರೈತ ಸಂಘಟನೆಗಳಿಂದ ಪಂಜಿನ ಮೆರವಣಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.27 : ಭದ್ರಾಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿ ಇದುವರೆವಿಗೂ ಹಣ ಬಿಡುಗಡೆಗೊಳಿಸದೆ ರೈತರನ್ನು ನಿರ್ಲಕ್ಷೆಯಿಂದ ಕಾಣುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಅಖಂಡ ಕರ್ನಾಟಕ ರೈತ ಸಂಘ, ವಿವಿಧ ಜನಪರ ಸಂಘಟನೆಳಿಂದ ಸೋಮವಾರ ರಾತ್ರಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗೆ ಧಿಕ್ಕಾರಗಳನ್ನು ಕೂಗಿದರು.

ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಹೊರಟ ಪಂಜಿನ ಮೆರವಣಿಗೆ ಲಕ್ಷ್ಮಿಬಜಾರ್, ಗಾಂಧಿವೃತ್ತ, ಸಂತೇಹೊಂಡದ ರಸ್ತೆ, ಎಸ್.ಬಿ.ಎಂ. ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಜಿಲ್ಲಾ ಪಂಚಾಯಿತಿಗೆ ತಲುಪಿತು.

ಪಂಜಿನ ಮೆರವಣಿಗೆಯನ್ನುದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಭದ್ರಾಮೇಲ್ದಂಡೆ ಯೋಜನೆಯನ್ನು ಜಾರಿಗೊಳಿಸುವಂತೆ ಕಳೆದ ಇಪ್ಪತ್ತೈದು ಮೂವತ್ತು ವರ್ಷಗಳಿಂದಲೂ ಹೋರಾಟ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಮಂಜೂರು ಮಾಡಿದೆಯೆ ವಿನಃ ಬಿಡುಗಡೆಗೊಳಿಸಿಲ್ಲ. ಇದರಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಲೋಕಸಭೆ ಚುನಾವಣೆಯೊಳಗಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆಗೊಳಿಸಿ ಕಾಮಗಾರಿಗೆ ಚುರುಕು ನೀಡಿ ಆದಷ್ಠು ಬೇಗನೆ ಜಿಲ್ಲೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಮತ ಚಲಾಯಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ರಾಜಣ್ಣ, ಹರಳಯ್ಯ, ಕರ್ನಾಟಕ ಜನಶಕ್ತಿಯ ಟಿ.ಶಫಿವುಲ್ಲಾ, ಸಿ.ಐ.ಟಿ.ಯು.ನ ಸಿ.ಕೆ.ಗೌಸ್‍ಪೀರ್, ರೈತ ಮುಖಂಡರುಗಳಾದ ನಾಗರಾಜರೆಡ್ಡಿ, ಲೋಕಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕುಮಾರ್ ಸಮತಳ, ಬಸ್ತಿಹಳ್ಳಿ ಸುರೇಶ್‍ಬಾಬು ಇನ್ನು ಮುಂತಾದವರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment