Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗಕ್ಕೆ ಭದ್ರಾ ನೀರು ಪ್ರವೇಶ; ನಾಳೆ ಗೋನೂರು ಬಳಿ ‘ತಾಯಿ ಭದ್ರೆ’ಗೆ ಅದ್ಧೂರಿ ಸ್ವಾಗತ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು, ಎಲ್ಲ ಪಕ್ಷಗಳ ಪ್ರಮುಖರು ಹೋರಾಟ ನಡೆಸಿದ ಪರಿಣಾಮ ಭದ್ರಾ ನೀರು ಜಿಲ್ಲೆ ಪ್ರವೇಶಿಸಿದ್ದು, ತಾಯಿ ಭದ್ರೆಯನ್ನು ಸ್ವಾಗತಿಸಲು ನಾಳೆ ಸೆ.10ರ ಗುರುವಾರ ಬೆಳಗ್ಗೆ 10.30ಕ್ಕೆ ಗೋನೂರು ಬಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ತಿಳಿಸಿದೆ.

ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಜಿಲ್ಲೆಯ ಮಠಾಧೀಶರು, ಹಾಲಿ-ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ತಾಯಿ ಭದ್ರೆಯನ್ನು ಸ್ವಾಗತಿಸುವ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಿಂದ ಕೈಬಿಟ್ಟಿರುವ ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ವಿವಿಧ ತಾಲ್ಲೂಕುಗಳಲ್ಲಿನ ಹಳ್ಳಿಗಳ ಕೆರೆಗಳನ್ನು ಸೇರಿಸಬೇಕು ಹಾಗೂ ಜಿಲ್ಲೆಗೆ ಸಮಗ್ರ ನೀರಾವರಿ ಯೋಜನೆ ಕಲ್ಪಿಸಬೇಕೆಂಬ ಎರಡನೇ ಹಂತದ ಹೋರಾಟ ಆರಂಭಿಸಬೇಕಿದೆ. ಮುಖ್ಯವಾಗಿ ಹೋರಾಟ ಮುನ್ನಡೆಸಿ ನಮ್ಮನ್ನು ಅಗಲಿರುವ ಸಮಿತಿಯ ಹೋರಾಟಗಾರರು, ವಿವಿಧ
ಕ್ಷೇತ್ರದ ಮುಂಚೂಣಿ ನಾಯಕರನ್ನು ಸ್ಮರಿಸಬೇಕಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಾಯಿ ಭದ್ರೆ ಹಾಗೂ ಹೋರಾಟಗಾರರಿಗೆ ಗೌರವ ಸಲ್ಲಿಸಬೇಕೆಂದು
ಸಮಿತಿ ಸಂಚಾಲಕ ಜೋಗಿಮಟ್ಟಿ ಮಹೇಶ ಬಾಬು (ಸಂಪರ್ಕ: 9900882955) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now