Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿನಿಮಾದಲ್ಲಿ ಕೊರಿಯೋಗ್ರಾಫರ್ ಆಗಿದ್ದ ಭದ್ರಾವತಿಯ ಯುವತಿಯ ಬರ್ಬರ ಕೊಲೆ ಮಾಡಿದ ಗಂಡ..!

---Advertisement---

 

 

ಬೆಂಗಳೂರು: ಪ್ರೀತಿಸಿ ಮದುವೆಯಾದವನೇ ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಬಳಿ ನಡೆದಿದೆ. ಭದ್ರಾವತಿ ಮೂಲದ ನವ್ಯಾ ಕೊಲೆಯಾದ ಮಹಿಳೆ. ಸಿನಿಮಾ ಇಂಡಸ್ಟ್ರಿಯಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು. ಇದೀಗ ಪತಿಯಿಂದಾನೇ ಬರ್ಬರ ಹತ್ಯೆಯಾಗಿದ್ದಾರೆ.‌ ಕೆಂಗೇರಿಯಾ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಘಟನೆ ನಡೆದಿದೆ.

ನವ್ಯಾ ಮೂಲತಃ ಭದ್ರಾವತಿಯವರು. ಆದರೆ ಕಳೆದ ಮೂರು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ಕಿರಣ್ ಎಂಬುವವರನ್ನು ಮದುವೆಯಾಗಿದ್ದರು. ಕಿರಣ್ ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಆದರೆ ಇಬ್ಬರು ಪ್ರೀತಿಸಿ, ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಆರಂಭದಲ್ಲಿ ಇಬ್ಬರ ದಾಂಪತ್ಯ ಚೆನ್ನಾಗಿಯೇ ಇತ್ತು. ಆದರೆ ಇತ್ತಿಚೆಗೆ ಇಬ್ಬರ ನಡುವೆ ಸಣ್ಣ ಪುಟ್ಟದ್ದಕ್ಕೂ ಜಗಳಗಳಾಗುತ್ತಿತ್ತು. ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ವಾಸವಿದ್ದರು. ನವ್ಯಾಗೆ ಈಗಿನ್ನು 25 ವರ್ಷ.

ಈ ಜಗಳವೇ ಅತಿರೇಕಕ್ಕೆ ತಲುಪಿ ಇಂದು ಮಧ್ಯಾಹ್ನ 3 ಗಂಟೆಗೆ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೆಂಡತಿಯನ್ನು ಖುರ್ಚಿಗೆ ಕಟ್ಟಿ ಹಾಕಿ, ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದಾನೆ. ನವ್ಯಾ ಮೇಲೆ ಪತಿ ಕಿರಣ್ ಯಾವಾಗಲೂ ಅನುಮಾನಗೊಳ್ಳುತ್ತಿದ್ದ. ಶೀಲ ಶಂಕಿಸಿ ಗಲಾಟೆ ಮಾಡುತ್ತಿದ್ದ. ಆದರೆ ಆ ಗಲಾಟೆಯೇ ಕೊಲೆಗೆ ಕಾರಣವಾಗಿದೆ. ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಕನಿಕರವಿಲ್ಲದಂತೆ ಕೊಂದಿದ್ದಾನೆ. ಖುರ್ಚಿಗೆ ಕಟ್ಟಿ, ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿದ್ದಾನೆ. ಕೊಲೆ ಮಾಡಿದ ಬಳಿಕ, ಅವಳ ಪರಿಸ್ಥಿತಿ ಏನು ಅಂತಾನು ನೋಡದೆ ಅಲ್ಲಿಂದ ಓಡಿ ಹೋಗಿದ್ದರು. ವಿಷಯ ತಿಳಿದ ಕೆಂಗೇರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ‌ನಡೆಸಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment