Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಗವದ್ಗೀತೆ ಸರ್ವಕಾಲಕ್ಕೂ ಸಲ್ಲುವಂತದ್ದು : ಶಿವಲಿಂಗಾನಂದ ಮಹಾಸ್ವಾಮಿಗಳು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಸರ್ವಕಾಲಕ್ಕೂ ಆದರಣೀಯವಾಗಿರುವ ಭಗವದ್ಗೀತೆಯನ್ನು ಎಲ್ಲರೂ ಪಠಣ ಮಾಡಬೇಕೆಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಹೇಳಿದರು.

ಭಗವದ್ಗೀತಾ ಅಭಿಯಾನ-ಕರ್ನಾಟಕ ಜಿಲ್ಲಾ ಸಮಿತಿ, ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನಂ ವತಿಯಿಂದ ವಾಸವಿ ಮಹಲ್‍ನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಭಗವದ್ಗೀತಾ ಜಿಲ್ಲಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಭಗವದ್ಗೀತೆಯಲ್ಲಿ ಕೇವಲ ಲೌಖಿಕವನ್ನಷ್ಟೆ ಉಪದೇಶ ಮಾಡಿಲ್ಲ. ಆಧ್ಯಾತ್ಮವನ್ನು ಒಳಗೊಂಡಿದೆ. ಹಾಗಾಗಿ ಭಗವದ್ಗೀತೆ ಸರ್ವಕಾಲಕ್ಕೂ ಸಲ್ಲುವಂತದ್ದು, ಅನೇಕ ಅಂಶಗಳನ್ನು ಒಳಗೊಂಡಿದೆ.
ನ್ಯಾಯಾಲಯದಲ್ಲಿ ಭಗವದ್ಗೀತೆಯನ್ನಿಟ್ಟು ಪ್ರಮಾಣ ಮಾಡಿಸುವುದುಂಟು. ಅಷ್ಟೊಂದು ಶ್ರೇಷ್ಠವಾದ ಗ್ರಂಥ ಎಂದು ತಿಳಿಸಿದರು.

ರಾಷ್ಟ್ರಪಿತ ಮಹಾತ್ಮಗಾಂಧಿ ದಿನಕ್ಕೆ ಎರಡು ಶ್ಲೋಕಗಳನ್ನು ಬರೆಯುತ್ತಿದ್ದರು. ಸಂದಿಗ್ದ ಪರಿಸ್ಥತಿಯಲ್ಲಿ ಅರ್ಜುನನಿಗೆ ಶ್ರೀಕೃಷ್ಣ ಭಗವದ್ಗೀತೆಯನ್ನು ಬೋಧಿಸಿದ. ಶಾಲಾ ಹಂತದಲ್ಲಿ ಮಕ್ಕಳು ಭಗವದ್ಗೀತೆಯನ್ನು ಪಠಣ ಮಾಡಿ ಅದರಲ್ಲಿ ಸಾರಾಂಶವನ್ನು ತಿಳಿದುಕೊಂಡು ಅದರಂತೆ ಬದುಕಿದರೆ ಒಳ್ಳೆಯದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ ಪ್ರಾಥಮಿಕ ಮತ್ತು ಪ್ರೌಢಾಲೆಗಳಲ್ಲಿ ಮಕ್ಕಳು ಭಗವದ್ಗೀತೆಯನ್ನು ಅಧ್ಯಯನ ಮಾಡಿದರೆ ಸಾಮರಸ್ಯದ ಬದುಕನ್ನು ಕಲಿಸುತ್ತದೆ. ಶ್ಲೋಕಗಳನ್ನು ಕಲಿತರೆ ಶಾಂತಿಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಭಗವದ್ಗೀತೆಯಲ್ಲಿನ ಸಾರಾಂಶವನ್ನು ಮಕ್ಕಳು ತಿಳಿದುಕೊಂಡು ತಮ್ಮಲ್ಲಿರುವ ಸೃಜನಶೀಲತೆಯನ್ನು ಹೊರಹೊಮ್ಮಿಸಿ. ಸಮಾಜ ಕಂಟಕರಾಗಬೇಡಿ ಎಂದು ಕಿವಿಮಾತು ಹೇಳಿದರು.

ಪ್ರಭಂಜನಾಚಾರ್ ಮಾತನಾಡುತ್ತ ಭಗವದ್ಗೀತೆ ಮೂಲಕ ಗೀತ ಗಂಗಾ ಗಾಯತ್ರಿ ಗೋವಿಂದ ಎನ್ನುವ ಶಬ್ದಗಳನ್ನು ಇಟ್ಟುಕೊಳ್ಳಬೇಕು. ಇದರಲ್ಲಿನ ಪ್ರತಿಯೊಂದು ಶ್ಲೋಕಗಳ ಅಧ್ಯಯನಕ್ಕೂ ಮಹತ್ವವಿದೆ. ಪ್ರತಿ ಮನೆ ಮನೆಗೆ ಭಗವದ್ಗೀತೆಯ ಪ್ರಾಮುಖ್ಯತೆಯನ್ನು ತಿಳಿಸಬೇಕಿದೆ. ಭಗವದ್ಗೀತೆ ಅಭಿಯಾನ ಎಲ್ಲರ ಮನದಲ್ಲಿ ಮನೆ ಮಾಡಬೇಕಾದರೆ ತಪ್ಪದೆ ಪಠಣ ಮಾಡಿ ಎಂದು ತಿಳಿಸಿದರು.

ಗೋನೂರು ಸಮೀಪವಿರುವ ರಾಜರಾಜೇಶ್ವರಿ ದೇವಸ್ಥಾನದ ನಾಗರಾಜ್‍ಭಟ್ ಮಾತನಾಡಿ 2007 ರಲ್ಲಿ ಭಗವದ್ಗೀತಾ ಅಭಿಯಾನ ಆರಂಭಗೊಂಡಿತು. 2009 ಹಾಗೂ 2019 ರಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಸಾಮಾಜಿಕ ಸಾಮರಸ್ಯ, ಅಪರಾಧಿಕರಣ ನಿಯಂತ್ರಣ, ಮನೋದೌರ್ಬಲ್ಯ ಈ ಮೂರಕ್ಕೂ ಭಗವದ್ಗೀತೆಯಲ್ಲಿ ಉತ್ತರವಿದೆ. ಚಿತ್ತಶುದ್ದಿ ಮನುಷ್ಯನಿಗೆ ತುಂಬಾ ಪ್ರಾಮುಖ್ಯವಾಗಿರುವುದರಿಂದ ಎಲ್ಲರೂ ಭಗವದ್ಗೀತೆಯನ್ನು ಪಠಣ ಮಾಡಲೇಬೇಕು ಎಂದು ಮನವಿ ಮಾಡಿದರು.

ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್, ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಇ.ಶ್ರೀನಿವಾಸ್‍ಬಾಬು, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ ವೇದಿಕೆಯಲ್ಲಿದ್ದರು.
ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಕಾರ್ಯಾಧ್ಯಕ್ಷ ಎಸ್.ಎನ್.ಕಾಶಿವಿಶ್ವನಾಥಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳು ಭಗವದ್ಗೀತಾ ಅಭಿಯಾನದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!