ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ ಜು. 06 : ರೋಟರಿ ಕ್ಲಬ್ ಯಾವುದೇ ಸೇವಾಪೇಕ್ಷೆ ಇಲ್ಲದೆ ಸಮಾಜದ ಒಳಿತಿಗಾಗಿ ಸೇವೆಯನ್ನು ಮಾಡುತ್ತಿದೆ, ಇದರಲ್ಲಿ ಆರೋಗ್ಯ, ಶಿಕ್ಷಣ, ಪರಿಸರ, ಸ್ವಚ್ಚತೆ, ಬಾಲಕಿಯರ ಸಬಲಿಕರಣ ಪೋಲಿಯೂ ನಿರ್ಮೂಲನೆ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಗವರ್ನರ್-ಆರ್ಐಡಿ 3160 ಎಂ.ಕೆ.ರವೀಂದ್ರ ತಿಳಿಸಿದರು.
ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಭಾಲಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 2025-2026ನೇ ಸಾಲಿನ ರೋಟರಿಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ನೇಹ ಮತ್ತು ಸೇವೆ ಎಂಬ ಧೈಯ ಹೊಂದಿರುವ ಒಂದು ಅಂತರಾಷ್ಟ್ರೀಯ ಸಂಸ್ಥೆ ಸಮಾಜದಲ್ಲಿ ಅನೇಕ ಸಮಾಜಮುಖಿ ಸೇವೆಗಳನ್ನ ಮಾಡುತ್ತಾ ಮಹಿಳೆಯರಿಗೆ ಒಂದು ದೊಡ್ಡ ವೇದಿಕೆ ಕಲ್ಪಿಸಿ ಕೊಟ್ಟಿದೆ ‘ರೋಟರಿಯಂತಹ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಅಧ್ಯಕ್ಷ ಸ್ಥಾನ ಎಂಬುದು ಅಧಿಕಾರ ಸ್ಥಾನವಾಗಿರದೆ ಸಾರ್ವಜನಿಕರ ಸೇವೆ ಸಲ್ಲಿಸಲು ಸಿಕ್ಕ ಒಂದು ಅವಕಾಶ ಎಂದರು.
ರೋಟರಿ ಅಂತರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾಗಿದ್ದು, ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಎಲ್ಲರಲ್ಲೂ ನಾಯಕತ್ವ ಗುಣಗಳಿರುತ್ತವೆ. ಅದನ್ನು ಗುರುತಿಸುವಂತಹ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಈಗಾಗಲೇ ರೋಟರಿಕ್ಲಬ್ ಸಮಾಜದಲ್ಲಿ ಹಲವಾರು ಉಪಯುಕ್ತವಾದ ಕಾರ್ಯಕ್ರಮಗಳನ್ನು ಮಾಡಿದೆ ಪೋಲಿಯೋ ನಿರ್ಮೂಲನೆಯಲ್ಲಿ ತನ್ನದೆ ಆದ ಪಾತ್ರವನ್ನು ವಹಿಸಿದೆ. ಪರಿಸರ ಕಾಳಜಿ, ಶಿಕ್ಷಣಕ್ಕೆ ಮಹತ್ವ ಆರೋಗ್ಯದ ಬಗ್ಗೆ ಜನ ಜಾಗೃತಿಯನ್ನು ಮೂಡಿಸುವಂತ ಕಾರ್ಯವನ್ನು ಕೈಗೆತ್ತಿಕೊಂಡಿದೆ ಎಂದರು.
ಚಿತ್ರದುರ್ಗ ರೋಟರಿ ಕ್ಲಬ್ನ ನೂತನ ಅಧ್ಯಕ್ಷರಾದ ಶ್ರೀಮತಿ ಭಾಗ್ಯಲಕ್ಷ್ಮೀ ಮೂರ್ತಿ, ಕಾರ್ಯದರ್ಶಿಯಾಗಿ ಅನುರಾಧ ವಿಶ್ವನಾಥ ಸೇರಿದಂತೆ ರೋಟರಿ ಕ್ಲಬ್ನ ಇತರೆ ಪದಾಧಿಕಾರಿಗಳು ಪದಗ್ರಹಣ ಮಾಡಿದರು.
ಕಾರ್ಯಕ್ರಮದಲ್ಲಿ ಪಿ.ಡಿ.ಜಿ.ಕೆ.ಮಧುಪ್ರಸಾದ್, ಪಿ.ಎಚ್.ಎಫ್.ಪಿ.ಡಿ.ಜಿ. ಶುಂಭುಲಿಂಗಪ್ಪ, ಚಿನ್ಮುಲಾದ್ರಿ ವಲಯದ ಸಹಾಯಕ ರಾಜ್ಯಪಾಲರಾದ ಆರ್ಟಿಎನ್.ಪಿಎಚ್ಇ.ಕಿರಣ್ ಕುಮಾರ್ರವರು ಕ್ಲಬ್ ಬುಲೆಟಿನ್ ರೋಟರಿ ಚಿತ್ರಾ ಬಿಡುಗಡೆ ಮಾಡಿದರು. ವೇದಾ ರವೀಂದ್ರ ಭಾಗವಹಿಸಿದ್ದರು ಉಮೇಶ್ ತುಪ್ಪದ್ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ವೀರಣ್ಣ, ವಂದನಾರ್ಪಣೆ ಅನುರಾಧ ವಿಶ್ವನಾಥ್, ನೂತನ ಅಧ್ಯಕ್ಷರಾದ ಭಾಗ್ಯಲಕ್ಷ್ಮೀ ಮೂರ್ತಿ ತಂಡವನ್ನು ಪರಿಚಯಿಸಿದರು. ಮಧು ಕೊಠಾರಿ ಪ್ರಾರ್ಥಿಸಿದರು. ರೋಟರಿ ಕ್ಲಬ್ನ ಪಬ್ಲಿಕ್ ಇಮೇಜ್ನ ಯೋಗೀಶ್ ಸಹ್ಯಾದ್ರಿ, ಮಾಜಿ ಅಧ್ಯಕ್ಷರಾದ ಮಾಧುರಿ ಮಧುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.













