Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ರೋಟರಿ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಭಾಗ್ಯಲಕ್ಷ್ಮೀ ಮೂರ್ತಿ, ಕಾರ್ಯದರ್ಶಿಯಾಗಿ ಅನುರಾಧ ಪದಗ್ರಹಣ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಜು. 06 : ರೋಟರಿ ಕ್ಲಬ್ ಯಾವುದೇ ಸೇವಾಪೇಕ್ಷೆ ಇಲ್ಲದೆ ಸಮಾಜದ ಒಳಿತಿಗಾಗಿ ಸೇವೆಯನ್ನು ಮಾಡುತ್ತಿದೆ, ಇದರಲ್ಲಿ ಆರೋಗ್ಯ, ಶಿಕ್ಷಣ, ಪರಿಸರ, ಸ್ವಚ್ಚತೆ, ಬಾಲಕಿಯರ ಸಬಲಿಕರಣ ಪೋಲಿಯೂ ನಿರ್ಮೂಲನೆ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಗವರ್ನರ್-ಆರ್‍ಐಡಿ 3160 ಎಂ.ಕೆ.ರವೀಂದ್ರ ತಿಳಿಸಿದರು.

ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಭಾಲಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 2025-2026ನೇ ಸಾಲಿನ ರೋಟರಿಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ನೇಹ ಮತ್ತು ಸೇವೆ ಎಂಬ ಧೈಯ ಹೊಂದಿರುವ ಒಂದು ಅಂತರಾಷ್ಟ್ರೀಯ ಸಂಸ್ಥೆ ಸಮಾಜದಲ್ಲಿ ಅನೇಕ ಸಮಾಜಮುಖಿ ಸೇವೆಗಳನ್ನ ಮಾಡುತ್ತಾ ಮಹಿಳೆಯರಿಗೆ ಒಂದು ದೊಡ್ಡ ವೇದಿಕೆ ಕಲ್ಪಿಸಿ ಕೊಟ್ಟಿದೆ ‘ರೋಟರಿಯಂತಹ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಅಧ್ಯಕ್ಷ ಸ್ಥಾನ ಎಂಬುದು ಅಧಿಕಾರ ಸ್ಥಾನವಾಗಿರದೆ ಸಾರ್ವಜನಿಕರ ಸೇವೆ ಸಲ್ಲಿಸಲು ಸಿಕ್ಕ ಒಂದು ಅವಕಾಶ ಎಂದರು.

ರೋಟರಿ ಅಂತರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾಗಿದ್ದು, ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಎಲ್ಲರಲ್ಲೂ ನಾಯಕತ್ವ ಗುಣಗಳಿರುತ್ತವೆ. ಅದನ್ನು ಗುರುತಿಸುವಂತಹ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಈಗಾಗಲೇ ರೋಟರಿಕ್ಲಬ್ ಸಮಾಜದಲ್ಲಿ ಹಲವಾರು ಉಪಯುಕ್ತವಾದ ಕಾರ್ಯಕ್ರಮಗಳನ್ನು ಮಾಡಿದೆ ಪೋಲಿಯೋ ನಿರ್ಮೂಲನೆಯಲ್ಲಿ ತನ್ನದೆ ಆದ ಪಾತ್ರವನ್ನು ವಹಿಸಿದೆ. ಪರಿಸರ ಕಾಳಜಿ, ಶಿಕ್ಷಣಕ್ಕೆ ಮಹತ್ವ ಆರೋಗ್ಯದ ಬಗ್ಗೆ ಜನ ಜಾಗೃತಿಯನ್ನು ಮೂಡಿಸುವಂತ ಕಾರ್ಯವನ್ನು ಕೈಗೆತ್ತಿಕೊಂಡಿದೆ ಎಂದರು.

ಚಿತ್ರದುರ್ಗ ರೋಟರಿ ಕ್ಲಬ್‍ನ ನೂತನ ಅಧ್ಯಕ್ಷರಾದ ಶ್ರೀಮತಿ ಭಾಗ್ಯಲಕ್ಷ್ಮೀ ಮೂರ್ತಿ, ಕಾರ್ಯದರ್ಶಿಯಾಗಿ ಅನುರಾಧ ವಿಶ್ವನಾಥ ಸೇರಿದಂತೆ ರೋಟರಿ ಕ್ಲಬ್‍ನ ಇತರೆ ಪದಾಧಿಕಾರಿಗಳು ಪದಗ್ರಹಣ ಮಾಡಿದರು.

ಕಾರ್ಯಕ್ರಮದಲ್ಲಿ ಪಿ.ಡಿ.ಜಿ.ಕೆ.ಮಧುಪ್ರಸಾದ್, ಪಿ.ಎಚ್.ಎಫ್.ಪಿ.ಡಿ.ಜಿ. ಶುಂಭುಲಿಂಗಪ್ಪ, ಚಿನ್ಮುಲಾದ್ರಿ ವಲಯದ ಸಹಾಯಕ ರಾಜ್ಯಪಾಲರಾದ ಆರ್‍ಟಿಎನ್.ಪಿಎಚ್‍ಇ.ಕಿರಣ್ ಕುಮಾರ್‍ರವರು ಕ್ಲಬ್ ಬುಲೆಟಿನ್ ರೋಟರಿ ಚಿತ್ರಾ ಬಿಡುಗಡೆ ಮಾಡಿದರು. ವೇದಾ ರವೀಂದ್ರ ಭಾಗವಹಿಸಿದ್ದರು ಉಮೇಶ್ ತುಪ್ಪದ್ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ವೀರಣ್ಣ, ವಂದನಾರ್ಪಣೆ ಅನುರಾಧ ವಿಶ್ವನಾಥ್, ನೂತನ ಅಧ್ಯಕ್ಷರಾದ ಭಾಗ್ಯಲಕ್ಷ್ಮೀ ಮೂರ್ತಿ ತಂಡವನ್ನು ಪರಿಚಯಿಸಿದರು. ಮಧು ಕೊಠಾರಿ ಪ್ರಾರ್ಥಿಸಿದರು. ರೋಟರಿ ಕ್ಲಬ್‍ನ ಪಬ್ಲಿಕ್ ಇಮೇಜ್‍ನ ಯೋಗೀಶ್ ಸಹ್ಯಾದ್ರಿ, ಮಾಜಿ ಅಧ್ಯಕ್ಷರಾದ ಮಾಧುರಿ ಮಧುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment