Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಪಾದಯಾತ್ರೆ : ಮುಂದಿನ ತಿಂಗಳು ಚಿತ್ರದುರ್ಗಕ್ಕೆ ಆಗಮನದ ಹಿನ್ನೆಲೆ ಪೂರ್ವಭಾವಿ ಸಭೆ

Facebook
Twitter
Telegram
WhatsApp

ಚಿತ್ರದುರ್ಗ, (ಸೆ.21) : ಕಾಂಗ್ರೆಸ್ ಯುವ ನೇತಾರ ರಾಹುಲ್‍ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ಕೈಗೊಂಡಿದ್ದು, ಮುಂದಿನ ತಿಂಗಳು ಹಿರಿಯೂರು ಮೂಲಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿರುವುದರಿಂದ ಪೂರ್ವಸಿದ್ದತೆ ಕುರಿತು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷ ಎಸ್.ಜಯಣ್ಣ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು.

ಪೂರ್ವಭಾವಿ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ತಿಮ್ಮಪ್ಪ ಮಾತನಾಡಿ ರಾಹುಲ್‍ಗಾಂಧಿರವರು ಕೈಗೊಂಡಿರುವ ಭಾರತ್ ಜೋಡೋ ಪಾದಾಯತ್ರೆಯುದ್ದಕ್ಕೂ ದೇಶದ ರೈತರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ನಿರುದ್ಯೋಗಿಗಳ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ದುರಾಡಳಿತದಿಂದ ಬೇಸತ್ತಿರುವ ಜನರನ್ನು ಜಾಗೃತಿಗೊಳಿಸುವುದಕ್ಕಾಗಿ ನಡೆಯುತ್ತಿರುವ ಪಾದಯಾತ್ರೆ ಹಿರಿಯೂರು ಮೂಲಕ ಚಳ್ಳಕೆರೆ, ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ತೆಲಂಗಾಣ ತಲುಪಲಿದೆ. ಅದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ಶಿವಣ್ಣ ಮಾತನಾಡಿ ಕೇಂದ್ರದಲ್ಲಿ ಎರಡನೆ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರಮೋದಿ ಚುನಾವಣಾ ಪೂರ್ವದಲ್ಲಿ ದೇಶದ ಜನರಿಗೆ ನೀಡಿದ್ದ ಯಾವ ಭರವಸೆಯನ್ನು ಈಡೇರಿಸಿಲ್ಲ. ಬದಲಾಗಿ ಅಗತ್ಯ ವಸ್ತುಗಳ ಬೆಲೆ ಏರಿಸಿ ಬಡವರನ್ನು ತತ್ತರಿಸುವಂತೆ ಮಾಡಿದ್ದಾರೆ. ಅದಕ್ಕಾಗಿ ಕೋಮುವಾದಿ ಬಿಜೆಪಿ.ಸರ್ಕಾರದ ವೈಫಲ್ಯವನ್ನು ರಾಹುಲ್‍ಗಾಂಧಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಜನರಿಗೆ ಮುಟ್ಟಿಸಲಿದ್ದಾರೆ ಎಂದರು.

ವೀಕ್ಷಕ ಮಲ್ಲೇಶಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಕಾಂಗ್ರೆಸ್ ಎಸ್.ಟಿ.ಸೆಲ್ ಅಧ್ಯಕ್ಷ ಹೆಚ್.ಅಂಜಿನಪ್ಪ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾಪರ್ಪ, ಬಿ.ಟಿ.ಜಗದೀಶ್, ಕೆ.ಪಿ.ಸಂಪತ್‍ಕುಮಾರ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಡಿ.ಕುಮಾರ್, ಕಾಂಗ್ರೆಸ್ ಉಪಾಧ್ಯಕ್ಷ ಜಿ.ಎಸ್.ಕುಮಾರ್‍ಗೌಡ, ದುರುಗೇಶ್ ಪೂಜಾರ್, ಗುರು, ಜೆ.ಪ್ರಕಾಶ್, ಕಲ್ಲೇಶ್, ನಾಗರಾಜ, ಸತೀಶ್, ಅಣ್ಣಪ್ಪ, ಮುಖೇಶ್, ಜಗದೀಶ್, ಮರುಳಾರಾಧ್ಯ, ಎಸ್.ಸಿ.ವಿಭಾಗದ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!