Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಭದ್ರಕೋಟೆಯಲ್ಲಿ ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿ ಜೊತೆ ಸೋನಿಯಾ ಗಾಂಧಿ ಹೆಜ್ಜೆ

Facebook
Twitter
Telegram
WhatsApp

ಮಂಡ್ಯ: ಭಾರತ್ ಜೋಡೊ ಯಾತ್ರೆ ಈಗ ಜೆಡಿಎಸ್ ಭದ್ರಕೋಟೆಯಲ್ಲಿ ಮುಂದುವರೆದಿದೆ. ಕೊಡಗಿಗೆ ಹೋಗಬೇಕಾಗಿದ್ದ ಸೋನಿಯಾ ಹವಮಾನ ವೈಪರೀತ್ಯದಿಂದ ಮೈಸೂರಿನಲ್ಲಿಯೇ ತಂಗಿದ್ದರು. ದಸರಾ ಹಬ್ಬದ ಸಂಭ್ರಮದಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ, ದೇವರ ಆಶೀರ್ವಾದವನ್ನು ಪಡೆದರು. ಇದೀಗ ಇಂದಿನಿಂದ ಮಂಡ್ಯದಿಂದ ಶುರುವಾದ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುತ್ತಿರುವುದು ಭಾರತ್ ಜೋಡೋ ಯಾತ್ರೆಗೆ ಮತ್ತಷ್ಟು ಕಳೆ ನೀಡಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಈ ಯಾತ್ರೆ ಸಾಗುತ್ತಿದೆ. ಇಂದು ಪಾಂಡವಪುರದಿಂದ ಶುರುವಾದ ಯಾತ್ರೆ ಬ್ರಹ್ಮದೇವರಹಳ್ಳಿಯ ತನಕ ಸಾಗಲಿದೆ. ಈ ವೇಳೆ ರಾಹುಲ್ ಗಾಂಧಿ ಜೊತೆಗೆ ಎಂದಿನಂತೆ ಕಾಂಗ್ರೆಸ್ ನಾಯಕರಾದ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ದಿಗ್ವಿಜಯ್ ಸಿಂಗ್ ಸೇರಿದಂತೆ ಇನ್ನಿತರರು ಹೆಜ್ಜೆ ಹಾಕಲಿದ್ದಾರೆ.

ಇನ್ನು ಜಕ್ಕನಹಳ್ಳಿಯಿಂದ ಸೋನಿಯಾ ಗಾಂಧಿ ಅವರು ಹೆಜ್ಜೆ ಹಾಕಿದ್ದರು. 15 ನಿಮಿಷಗಳ ಕಾಲ ನಡೆದ ಸೋನಿಯಾ ಗಾಂಧಿ, ರಾಜ್ಯ ನಾಯಕರ ಜೊತೆಗೆ ಚರ್ಚೆ ಕೂಡ ನಡೆಸಿದರು. ಎರಡು ದಿನದಿಂದ ಸೋನಿಯಾ ಗಾಂಧಿ ಮೈಸೂರಿನಲ್ಲಿಯೇ ಉಳಿದಿದ್ದರು. ಇಂದು ಮಗನ ಜೊತೆಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!