ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ನೇಮಕ

1 Min Read

 

ಸುದ್ದಿಒನ್, ಚಿತ್ರದುರ್ಗ : ಫೆ (22) : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಯುವ ನಾಯಕಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ.

ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಶಾಸಕ ಧೀರಜ್ ಮುನಿರಾಜ್ ರವರು ಇಂದು ಬೆಂಗಳೂರಿನಲ್ಲಿ ಅಧಿಕೃತ ನೇಮಕ ಪತ್ರವನ್ನು ನೀಡಿದರು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ, ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು. ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕಾರ್ಯ ನಿರ್ವಹಿಸಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂ ಸಹ   ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *