Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುನಿರತ್ನ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಹಿರಂಗ ಕ್ಷಮೆಯಾಚಿಸಲಿ : ಭಾರ್ಗವಿ ದ್ರಾವಿಡ್ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆಪ್ಟೆಂಬರ್. 14 : ರಾಜರಾಜೇಶ್ವರಿ ನಗರದ ಶಾಸಕರಾದ ಮುನಿರತ್ನರವರು ಗುತ್ತಿಗೆದಾರರೊಬ್ಬರೊಂದಿಗೆ ತನ್ನ ಹಣಕಾಸಿನ ವ್ಯವಹಾರ ಮಾತನಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಹಾಗೂ ಎಲ್ಲರೂ ಕೇಳಿರುವುದು ಸತ್ಯ.  ಈ ಹಿನ್ನೆಲೆಯಲ್ಲಿ ಅವರಿಗೆ ಆತ್ಮಸಾಕ್ಷಿ ಆತ್ಮ ಗೌರವ ಇದ್ದರೆ ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ.  ಇದರ ಜೊತೆಗೆ ಅವರ ಈ ಪ್ರಕರಣವು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಅವರ ಮೇಲೆ ಜಾತಿನಿಂದನೆ ಪ್ರಕರಣವನ್ನು ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಕೀಲರು ಹಾಗೂ ಛಲವಾದಿ ಸಮುದಾಯದ ನಾಯಕಿ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು,  ಈ ಸಮಾಜದಿಂದಲೇ ಹುಟ್ಟಿ ಬಂದವರು” ಈ ಸಮಾಜಕ್ಕೆ ಈ ರೀತಿ ತುಚ್ಛ ಮನಸ್ಸಿನಿಂದ ಬಯ್ಯುವುದು ಅಥವಾ ಅವಮಾನಿಸುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದಂತೆಯೇ ಸರಿ. ಬಾಬಾ ಸಾಹೇಬರು ಈ ರೀತಿ ತನ್ನ ಸಮಾಜಕ್ಕೆ ಸ್ವಾರ್ಥದಿಂದ ನೋಡಿಕೊಳ್ಳದೆ ಇಡೀ ಭಾರತದಲ್ಲಿರುವ ಶೋಷಿತ ಸಮಾಜಕ್ಕೆ ಶ್ರಮಿಸಿದವರು ಆದರೆ ಪೂರ್ವಗ್ರಹ ಪೀಡಿತರಾಗಿ ಈ ಸಮಾಜವನ್ನು ಕೆಟ್ಟ ರೀತಿಯಿಂದ ನೋಡುವುದು ಕೆಟ್ಟ ರೀತಿಯಿಂದ ಹೇಳುವುದು ಎಷ್ಟು ಸರಿ?…

ಶಾಸಕ ಮುನಿರತ್ನ ರವರು ಈ ಸಮಾಜವನ್ನು ಅವಮಾನಿಸಿರುವುದು ಇಡೀ ರಾಷ್ಟ್ರಕ್ಕೆ ಮಾಡಿದ ಅಪಮಾನ ಹಾಗೂ ಎಲ್ಲರೂ ತಲೆತಗ್ಗಿಸಬೇಕಾಗಿರುವ ಪ್ರಸಂಗ ಬಂದಿರುವುದು ಅಂತೂ ಸತ್ಯ..  ಈ ನಿಟ್ಟಿನಲ್ಲಿ ಮುನಿರತ್ನ ರವರು ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನದ ಭಿಕ್ಷೆಯ ವರದಿಂದ ಶಾಸಕರಾಗಿರುವುದು ಸತ್ಯ.  ಅದರೆ ಇದೇ ಸಮಾಜವನ್ನು ಬೈಯುವುದು ಎಷ್ಟು ಸರಿ?.. ಈ ಹಿನ್ನೆಲೆಯಲ್ಲಿ ಅವರಿಗೆ ಆತ್ಮಸಾಕ್ಷಿ ಆತ್ಮ ಗೌರವ ಇದ್ದರೆ ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ.  ಇದರ ಜೊತೆಗೆ ಅವರ ಈ ಪ್ರಕರಣವು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಅವರ ಮೇಲೆ ಜಾತಿನಿಂದನೆ ಪ್ರಕರಣವನ್ನು ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು .ಹೊಲೆಯ ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ನಿಂದಿಸಿ ಆತನಿಗೆ ಬೈದಿದ್ದಾರೆ. ನಮ್ಮ ಸಮುದಾಯವೂ ಕೂಡ ಇಂದು ಅವರು ಶಾಸಕರಾಗಲು ಮತವನ್ನು ಕೊಟ್ಟು ಕಾರಣರಾಗಿದ್ದಾರೆ ಎಂಬುದನ್ನು ಅವರು ಮರೆತಂತಿದೆ. ಅವರು ಈ ಪ್ರಜಾಪ್ರಭುತ್ವದಲ್ಲಿ ಶಾಸಕರಾಗಿ ಮುಂದುವರೆಯಲು ಯೋಗ್ಯರಲ್ಲದ ವ್ಯಕ್ತಿ. ಈ ತಕ್ಷಣ ಅವರು ರಾಜೀನಾಮೆ ನೀಡಿ ನಮ್ಮ ಸಮುದಾಯವನ್ನು ಬಹಿರಂಗ ಕ್ಷಮೆ ಯಾಚಿಸುವಂತೆ ಆಗ್ರಹ ಪಡಿಸಿದರು.

 

ಈ ವ್ಯಕ್ತಿಯ ಜಾತಿನಿಂದನೆಯ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ ಪಕ್ಷದ ಉನ್ನತ ಮಟ್ಟದ ಜವಾಬ್ದಾರಿ ಇರುವವರು ಮತ್ತು ರಾಜ್ಯಾಧ್ಯಕ್ಷರು ಅವರ ವಿರುದ್ದ ಕ್ರಮ ಜರುಗಿಸುವಂತೆ ಜನಾಂಗದ ಪರ ಮನವಿ ಮಾಡಿದ್ದು, ಮಹಿಳೆಯರನ್ನು ತನ್ನ ಬೈಗುಳದಲ್ಲಿ ಅವಾಚ್ಯವಾಗಿ ನಿಂದಿಸಿರುವ ಕಾರಣ ರಾಜ್ಯ ಮತ್ತು ಕೇಂದ್ರದ ಮಹಿಳಾ ಆಯೋಗವು ಸುಮೋಟೋ ದೂರು ದಾಖಲಿಸಿಕೊಂಡು ಕಾನೂನಿನನ್ವಯ ಅವರಿಗೆ ಶಿಕ್ಷೆ ನೀಡಬೇಕು. ಮತ್ತು ರಾಜ್ಯ ಸರ್ಕಾರವೂ ಕೂಡ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇದೊಂದು ಆಕಸ್ಮಿಕ ಬೈಗುಳ ಎಂದು ಹೇಳುವ ಮೂಲಕ ನಿಂದನೆಗೊಳಪಟ್ಟ ಸಮುದಾಯದ ನಾಯಕರಾದ ಗೃಹ ಸಚಿವರು ಬೇಜವಬ್ದಾರಿ ಹೇಳಿಕೆ ಕೊಟ್ಟು ಸುಮ್ಮನಾಗಬಾರದು. ಎಂದು ಪತ್ರಿಕೆಗೆ ತಿಳಿಸಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...