Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಧಾನ ಸಭೆ ವಿಫಲ : ಭವಾನಿ ರೇವಣ್ಣ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ತಾರಾ : ಏನಂದ್ರು ನಿಖಿಲ್..?

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನ ಕುಟುಂಬ ರಾಜಕಾರಣದ್ದೆ ಸಿಕ್ಕಾಪಟ್ಟೆ ಸದ್ದಾಗುತ್ತಿದೆ. ಹಾಸನ ಟಿಕೆಟ್ ಗಾಗಿ ಭವಾನಿ ರೇವಣ್ಣ ಈ ಮೊದಲೇ ಡಿಮ್ಯಾಂಡ್ ಇಟ್ಟಿದ್ದರು. ಆದರೆ ಇದಕ್ಕೆ ಕುಮಾರಸ್ವಾಮಿ ಓಕೆ ಎಂದಿಲ್ಲ. ದೇವೇಗೌಡರ ಅಂಗಳದಲ್ಲಿ ಹಾಸನದ ಟಿಕೆಟ್ ತಗಾದೆ ಇತ್ತು. ನಿನ್ನೆ ನಡೆದ ಸಂಧಾನ ಸಭೆ ಕೂಡ ವಿಫಲವಾಗಿದೆ.

ಈ ಬೆನ್ನಲ್ಲೇ ಭವಾನಿ ರೇವಣ್ಣ ಅವರು ಟಿಕೆಟ್ ಸಿಗದೆ ಹೋದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಈ ಬಗ್ಗೆ ನನಗೇನು ಮಾಹಿತಿ ಇಲ್ಲ. ಕುಮಾರಣ್ಣನಿಗೆ ಕೇಳಬೇಕು. ಇದಕ್ಕೆಲ್ಲಾ ಉತ್ತರ ನೀಡುವುದಕ್ಕೆ ಅವರೇ ಸೂಕ್ತ ಎಂದಿದ್ದಾರೆ.

ಇನ್ನುಳಿದಂತೆ ಹಾಸನದಲ್ಲಿ ಯಾರಿಗೆ ಟಿಕೆಟ್ ಸಿಗಬಹುದು ಎಂಬುದರ ಬಗ್ಗೆಯೂ ಮಾತನಾಡಿ, ದಿವಂಗತ ಪ್ರಕಾಶ್ ಅಣ್ಣ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರ ಕುಟುಂಬಕ್ಕೆ ಹಾಸನದಲ್ಲಿ ಒಳ್ಳೆಯ ಹೆಸರಿದೆ. ಸ್ವರೂಪ್ ಪ್ರಕಾಶ್ ಕೂಡ ಯುವಕರು. ಜನರ ಜೊತೆಗೆ ಒಳ್ಳೆಯ ಸಂಪರ್ಕದಲ್ಲಿದ್ದಾರೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಒಂದು ಕಮಿಟಿ ಇದೆ. ಅವರ ಸಲಹೆ ಮೇರೆಗೆ ಅಂತಿಮವಾಗಿ ದೇವೇಗೌಡರೇ ಟಿಕೆಟ್ ಹಂಚಿಕೆ ಮಾಡ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!