Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಡೆಗೂ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ರಾಜೀನಾಮೆ

---Advertisement---

 

ಬೆಂಗಳೂರು: ಕಮಿಷನ್ ಕೇಳಿದ ಆರೋಪ ಹೊತ್ತಿದ್ದ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರವಿಕುಮಾರ್ ಅವರ ರಾಜೀನಾಮೆ ವಿಚಾರವನ್ನು ಸಿಎಂ ಕಚೇರಿ ಸ್ಪಷ್ಟಪಡಿಸಿದೆ. ಇಂದು ಬೆಳಗ್ಗೆಯೇ ಸಿಎಂ ಕಚೇರಿಗೆ ಭೇಟಿ ನೀಡಿದ ರವಿಕುಮಾರ್ ಅವರು, ಸಿಎಂ ಬಳಿ ಇದರ ಹಿಂದಿನ ಸತ್ಯಾಂಶವನ್ನು ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ತಮ್ಮ ಮೇಲಿನ ಆರೋಪವನ್ನು ರವಿಕುಮಾರ್ ಅವರು ತಳ್ಳಿ ಹಾಕಿದ್ದಾರೆ. ವಿಡಿಯೋದಲ್ಲಿ ಇರುವ ಆಡಿಯೋ ತಮ್ಮದಲ್ಲ. ಎಐ ತಂತ್ರಜ್ಞಾನ ಬಳಸಿ ತಿರುಚಲಾಗಿದೆ. ನಾನು ಯಾರಿಂದಲೂ ಹಣ ತೆಗೆದುಕೊಂಡಿಲ್ಲ, ಯಾರಿಗೂ ಕೊಟ್ಟಿಲ್ಲ. ವಿಡಿಯೋವನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸದರೆ ಸತ್ಯ ಬಯಲಿಗೆ ಬರುತ್ತದೆ ಎಂದಿದ್ದಾರೆ. ತಮ್ಮ ಮೇಲಿನ ಆರೋಪವನ್ನು ಈ ಮೂಲಕ ತಳ್ಳಿ ಹಾಕಿದ್ದಾರೆ. ಆದರೂ ಸಿದ್ದರಾಮಯ್ಯ ಅವರು ಸೂಚನೆ ಮೇರೆಗೆ ರಾಜೀನಾಮೆಯನ್ನ ನೀಡಿದ್ದಾರೆ.

ಎಸ್ ರವಿಕುಮಾರ್ ವಿರುದ್ಧ ಭೂ ಒಡೆತನದ ಯೋಜನೆಯಡಿ 60% ಕಮಿಷನ್ ಕೇಳಿದ ಆರೋಪ ಇದೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಭೋವಿ ಸಮುದಾಯದ ಭೂ ರಹಿತ ಕಾರ್ಮಿಕ ಮಹಿಳೆಯರಿಗೆ ಭೂ ಒಡೆತನದ ಯೋಜನೆಯಡಿ ಅನುದಾನ ನೀಡುವುದಾಗಿದೆ. ಈ ಯೋಜನೆಯಡಿ 15 ಕೋಟಿ ರೂಪಾಯಿ ವೆಚ್ಚದಲ್ಲಿ60 ಕೋಟಿ ವೆಚ್ಚದಲ್ಲಿ 60 ಎಕರೆ ಭೂಮಿಯನ್ನು ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಉದ್ದೇಶವಿತ್ತು. ಈ ಯೋಜನೆಯ ಫಲಾನುಭವಿಗಳಿಂದ ಶೇಕಡಾ 40 ರಿಂದ 60 ರಷ್ಟು ಕಮಿಷನ್ ವಸೂಲಿ ಮಾಡಲಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ. ಈ ಸಂಬಂಧ ವಿಡಿಯೋ ಕೂಡ ವೈರಲ್ ಆಗಿದ್ದು, ತಮ್ಮ ಹುದ್ದೆಗೆ ರಾಜೀನಾಮೆಯನ್ನ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...