Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹನಿಟ್ರ್ಯಾಪ್ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ ; ರಾಜಣ್ಣರಿಗೆ ಬಹಿರಂಗ ಬೆಂಬಲ ನೀಡಿದ ದಳಪತಿಗಳು..!

---Advertisement---

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಾರೀ ಸದ್ದು ಮಾಡ್ತಾ ಇದೆ. ಹನಿಟ್ರ್ಯಾಪ್ ಮಾಡಲು ಬಂದ ನೀಲಿ ಸುಂದರಿ ಬಗ್ಗೆ ಈಗಾಗಲೇ ಸಚಿವ ಕೆ.ಎನ್.ರಾಜಣ್ಣ ದೂರು ಕೂಡ ನೀಡಿದ್ದಾರೆ. ಇದೀಗ ದೊಡ್ಡ ಬೆಳವಣಿಗೆಯೊಂದು ಹನಿಟ್ರ್ಯಾಪ್ ಪ್ರಕರಣದಲ್ಲಿ ನಡೆದಿದೆ. ಅದುವೆ ಕೋಪ ಮರೆತು ದಳಪತಿಗಳು ಬಹಿರಂಗವಾಗಿ ಬೆಂಬಲ ಸೂಚಿಸಿದ್ದಾರೆ.

ಹೌದು, ಸದನದಲ್ಲಿಯೇ ಈ ಸಂಬಂಧ ರಾಜಣ್ಣ ಅವರ ಬಳಿ ರೇವಣ್ಣ ಅವರು ಮಾತುಕತೆ ನಡೆಸಿದ್ದರು. ಇದೀಗ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಹಾಗೆ ನೋಡಿದ್ರೆ ರಾಜಣ್ಣ ಹಾಗೂ ದೇವೇಗೌಡತ ಕುಟುಂಬದ ನಡುವೆ ಜಿದ್ದಾಜಿದ್ದು ಹಲವು ವರ್ಷಗಳಿಂದಾನೂ ಇದೆ. ಈ ಜಿದ್ದಾಜಿದ್ದಿನ ರಾಜಕೀಯ 2008ರ ಮಧುಗಿರಿ ಉಪಚುನಾವಣೆಯಲ್ಲಿಯೇ ಬಹಿರಂಗವಾಗಿತ್ತು. ಅಂದು ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕುಮಾರಸ್ವಾಮಿ ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಕೆ.ಎನ್.ರಾಜಣ್ಣ ಸೋಲಿಸಿದ್ದರು. ಬಳಿಕ 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧೆ ಮಾಡಿದ್ದರು. ಆ ಸಂದರ್ಭದಲ್ಲಿ ದೇವೇಗೌಡರ ವಿರುದ್ಧ ರಾಜಣ್ಣ ವಾಗ್ದಾಳಿ ನಡೆಸಿದ್ದರು. ದೇವೇಗೌಡರ ವಿರುದ್ಧ ಕೀಳುಮಟ್ಟದ ಪದ ಬಳಸಿ, ದೇವೇಗೌಡರ ಕುಟುಂಬದ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ನೋಡಿದ್ರೆ ಅದೇ ದಳಪತಿಗಳು ದ್ವೇಷ ಮರೆತು ಒಂದಾಂತೆ ಕಾಣಿಸ್ತಾ ಇದಾರೆ.

ವಿಧಾನಸಭೆಯಲ್ಲಿ ಮಾತಾಡುವಾಗ ಕೆ.ಎನ್.ರಾಜಣ್ಣ ಅವರು ರೇವಣ್ಣ ಫ್ಯಾಮಿಲಿಯ ಪರವಾಗಿ‌ ಮಾತನಾಡಿದ್ದರು. ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರ ಬಗ್ಗೆ ಮಾತನಾಡಿದ್ದರು. ಹೀಗಾಗಿ ಹೆಚ್.ಡಿ.ರೇವಣ್ಣ ಅವರು ಇದೀಗ ರಾಜಣ್ಣ ಪರವಾಗಿ ಬ್ಯಾಟ್ ಬೀಸಿದ್ದಾರೆ. ಜೆಡಿಎಸ್ ನಾಯಕರು ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಪಟ್ಟು ಹಿಡಿದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment