ಬೆಂಗಳೂರು: ಬಿಜೆಪಿ ವಿರುದ್ಧ ಜಾಹೀರಟತು ನೀಡಿದ್ದರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರುಗೆ ಜಾಮೀನು ಮಂಜೂರಾಗಿದೆ. ಈ ಮೂಲಕ ಇಬ್ಬರು ರಿಲ್ಯಾಕ್ಸ್ ಆಗಿದ್ದಾರೆ. ಖಾಸಗಿ ಮಾನನಷ್ಟ ಕೇಸಲ್ಲಿ ಇದೀಗ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಿಎಂ ಸೇರಿದಂತೆ ಹಲವು ಹುದ್ದೆಗಳ ಬಗ್ಗೆ ಕಾಂಗ್ರೆಸ್ ಜಾಹೀರಾತು ಹೊರಡಿಸಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಸಿಎಂ ಹುದ್ದೆಗಾಗಿ 2500 ಕೋಟಿ, ಮಂತ್ರಿ ಸ್ಥಾನಕ್ಕಾಗಿ 500 ಕೋಟಿ ರೂಪಾಯಿ ಬಿಜೆಪಿ ಪಕ್ಷಕ್ಕೆ ನೀಡಿ, ಅಧಿಕಾರ ಸ್ವೀಕಾರ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿತ್ತು. ಕೋವಿಡ್ ಕಿಟ್ ಪೂರೈಕೆ ಟೆಂಡರ್ ಡೀಲ್ನಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್ನಲ್ಲಿ ಶೇ 40 ರಷ್ಟು ಸೇರಿದಂತೆ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ಕಮೀಷನ್ ಡೀಲ್ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಈ ಸಂಬಂಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಾಗಿತ್ತು.
ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಮುಂದೆ ಇಬ್ಬರು ನಾಯಕರು ಹಾಜರಾಗಿದ್ದರು. ಜಡ್ಜ್ ಮುಂದೆ ಡಿಕೆ ಶಿವಕುಮಾರ್ ಕೈಕಟ್ಟಿ ನಿಂತಿದ್ದರು. ಆರೋಪಿಗಳು ಯಾರು ಯಾರು ಎಂಬ ಪ್ರಶ್ನೆಗೆ ವಕೀಲರು ಎ-2 ಡಿಕೆ ಶಿವಕುಮಾರ್, ಎ-3 ಸಿದ್ದರಾಮಯ್ಯ ಎಂದು ವಕೀಲರು ಕೋರ್ಟ್ಗೆ ತಿಳಿಸಿದರು. ಇದೇ ವೇಳೆ ಇಬ್ಬರೂ ಕೂಡ ಜಾಮೀನು ನೀಡುವಂತೆ ಮನವಿ ಮಾಡಿಕೊಂಡರು. ಅಲ್ಲದೇ ವಿಚಾರಣೆ ಹಾಜರಾಗದ ರಾಹುಲ್ ಗಾಂಧಿಗೆ ವಿನಾಯತಿ ನೀಡುವಂತೆ ಕೋರ್ಟ್ ಬಳಿ ಕಾಂಗ್ರೆಸ್ ಪರ ವಕೀಲರು ಮನವಿ ಮಾಡಿಕೊಂಡರು. ವಿಚಾರಣೆ ಬಳಿಕ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












