Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್ : ಅ.8ರವರೆಗೆ ಗಡಿಪಾರಿಗೆ ತಡೆ

---Advertisement---

 

ದಕ್ಷಿಣ ಕನ್ನಡ: ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಬೆಳ್ತಂಗಡಿಯಲ್ಲಿ ಮಹೇಶ್ ತಿಮರೋಡಿ ಇರಬಾರದು ಅಂತ ರಾಯಚೂರಿಗೆ ಗಡಿಪಾರು ಮಾಡಲಾಗಿತ್ತು. ಹೀಗಾಗಿ ತಿಮರೋಡಿ ಕೂಡ ಬೆಳ್ತಂಗಡಿ ಬಿಟ್ಟು ರಾಯಚೂರಿಗೆ ಹೋಗಬೇಕಾಗಿತ್ತು. ಅದಕ್ಕೆ ಈಗ ರಿಲೀಫ್ ಸಿಕ್ಕಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಬೆಳ್ತಂಗಡಿ ಉಪವಿಭಾಗಾಧಿಕಾರಿ ಆದೆರಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಆ ಸಂಬಂಧ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್, ಉಪ ವಿಭಾಗಾಧಿಕಾರಿಯ ಆದೇಶಕ್ಕೆ ತಡೆ ನೀಡಿದೆ. ಅಕ್ಟೋಬರ್ 8ರ ವರೆಗೆ ಉಪ ವಿಭಾಗಾಧಿಕಾರಿಯ ಆದೇಶಕ್ಕೆ ತಡೆ ನೀಡಿದೆ.

ಸದ್ಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅರ್ಜಿ ವಿಚಾರಣೆ ನಡೆಸಿ, ನಂತರ ಕೋರ್ಟ್ ತೀರ್ಮಾನ ತೆಗೆದುಕೊಳ್ಳಲಿದೆ. ಸದ್ಯ ತಿಮರೋಡಿಗೆ ರಾಯಚೂರಿಗೆ ಹೋಗುವ ವಿಚಾರಕ್ಕೆ ರಿಲೀಫ್ ಸಿಕ್ಕಿದೆ. ಸೌಜನ್ಯ ಕೇಸ್ ವಿಚಾರವಾಗಿ ಅಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಇತ್ತೀಚೆಗೆ ಸದ್ದು ಮಾಡಿದ ಧರ್ಮಸ್ಥಳ ಬುರುಡೆ ಕೇಸಲ್ಲೂ ಮಹೇಶ್ ತಿಮರೋಡಿಯನ್ನ ತನಿಖೆ ಮಾಡಲಾಗಿತ್ತು. ಚಿನ್ನಯ್ಯನಿಗೆ ಮಹೇಶ್ ತಿಮರೋಡಿಯೇ ಆಶ್ರಯ ನೀಡಿದ್ದರು ಎಂಬೆಲ್ಲಾ ಆರೋಪಗಳು ಕೇಳಿ ಬಂದಿದ್ದವು. ಇದೆಲ್ಲಾ ಬೆಳವಣಿಗೆಯ ನಡುವೆ ಮಹೇಶ್ ತಿಮರೋಡಿಯನ್ನ ಬೆಳ್ತಂಗಡಿ ಉಪ ವಿಭಾಗದ ಅಧಿಕಾರಿ ರಾಯಚೂರಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಹೈಕೋರ್ಟ್ ಈಗ ಆ ಆದೇಶಕ್ಕೆ ತಡೆ ನೀಡಿದೆ. ಸದ್ಯಕ್ಕೆ ಬೆಳ್ತಂಗಡಿಯಲ್ಲಿಯೇ ಮಹೇಶ್ ತಿಮರೋಡಿ ಇರಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...