Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಪೇಂದ್ರಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.. ಎಫ್ಐಆರ್ ಗೆ ತಡೆಯಾಜ್ಞೆ

Facebook
Twitter
Telegram
WhatsApp

 

ಉಪೇಂದ್ರ ಅವರಿಗೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನಿಂದ ಎಫ್ಐಆರ್ ಗೆ ತಡೆ ನೀಡಲಾಗಿದೆ. ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ಹಾಕಲಾಗಿದ್ದ ಎಫ್​ಐಆರ್​ಗೆ ತಡೆ ನೀಡಬೇಕು ಎಂದು ಕೋರಿ ಉಪೇಂದ್ರ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಅವರ ಪರವಾಗಿ ಕೋರ್ಟ್​ ಆದೇಶ ನೀಡಿದೆ. ‘ಗಾದೆ ಮಾತು ಉಲ್ಲೇಖಿಸಿ ಉಪೇಂದ್ರ ಹೇಳಿಕೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಇದಕ್ಕೆ ಅನ್ವಯವಾಗುವುದಿಲ್ಲ’ ಎಂದು ಉಪೇಂದ್ರ ಪರವಾಗಿ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ದಾರೆ.

ಜಾತಿ ನಿಂದನೆ ಆರೋಪ ಎದುರಾದ ಬಳಿಕ ಉಪೇಂದ್ರ ಅವರ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಕಿಡಿಕಾರಲು ಆರಂಭಿಸಿದರು. ಈಗ ಉಪೇಂದ್ರ ಅವರ ಮನೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಬೆಂಗಳೂರಿನ ಕತ್ತರಿಗುಪ್ಪೆ ಮತ್ತು ಸದಾಶಿವ ನಗರದ ತಮ್ಮ ನಿವಾಸದಲ್ಲಿ ಉಪೇಂದ್ರ ಇಲ್ಲ ಎಂದು ಹೇಳಲಾಗುತ್ತಿದೆ. ಆದರೂ ಮುಂಜಾಗೃತ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇನ್ನು ಉಪೇಂದ್ರ ಅವರ ಹೇಳಿಕೆ ಕುರಿತು ಬೆಂಗಳೂರು ಯೂನಿವರ್ಸಿಟಿ ವಿದ್ಯಾರ್ಥಿಗಳು ಕೂಡ ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ಉಪೇಂದ್ರ ಅವರು ಫೇಸ್ ಬುಕ್ ಲೈವ್ ನಲ್ಲಿ ಮಾತಾಡುವಾಗ ಗಾದೆ ಮಾತೊಂದನ್ನು ಹೇಳಿದ್ದರು. ಊರಿದ್ದ ಮೇಲೆ ಹೊಲಗೇರಿ ಇದ್ದೆ ಇರುತ್ತೆ ಎಂದಿದ್ದರು. ಇದರಿಂದ ಒಂದು ಸಮುದಾಯಕ್ಕೆ ಅವಹೇಳನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಉಪೇಂದ್ರ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಪ್ರತಿಭಟನೆಗಳು ಕೂಡ ನಡೆದಿತ್ತು. ಉಪೇಂದ್ರ ಅವರನ್ನು ಬಂಧಿಸಬೇಕೆಂದು ಒತ್ತಾಯ ಕೇಳಿ ಬಂದಿತ್ತು. ಇದೀಗ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

error: Content is protected !!