Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿ ಸೋಮಣ್ಣಗೆ ಬಿಗ್ ಶಾಕ್ : ಉದ್ಘಾಟನೆಗೆ ಎರಡು ದಿನ ಬಾಕಿ ಇರುವಾಗಲೇ ಕಚೇರಿ ವಾಪಾಸ್ ಪಡೆದ ಸರ್ಕಾರ..!

Facebook
Twitter
Telegram
WhatsApp

ತುಮಕೂರು: ವಿ ಸೋಮಣ್ಣ ಸದ್ಯ ತುಮಕೂರು ಜನರ ಆಶೀರ್ವಾದದಿಂದ ಗೆದ್ದು ಸಂಸದರಾಗಿದ್ದಾರೆ. ಅಷ್ಟೇ ಅಲ್ಲ ಕೇಂದ್ರ ಸಚಿವರು ಆಗಿದ್ದಾರೆ. ತುಮಕೂರಿನಲ್ಲಿ ಕಚೇರಿ ಉದ್ಘಾಟನೆ ಮಾಡುವುದಕ್ಕೆಂದು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಇದೀಗ ಆ ವಿಚಾರಕ್ಕೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

ತುಮಕೂರು ರೈಲ್ವೆ ಸ್ಟೇಷನ್ ಬಳಿ ಇರುವ ಐಬಿಯನ್ನು ಸೋಮಣ್ಣ ಅವರಿಗೆ ಕಚೇರಿ ಉಪಯೋಗಕ್ಕೆ ಕೊಡಲಾಗಿತ್ತು. ಹೀಗಾಗಿ ಸೋಮಣ್ಣ ಅವರು ಕೂಡ ಕಚೇರಿಯನ್ನು ಇನ್ನೊವೇಟ್ ಮಾಡುವುದಕ್ಕಾಗಿ ತಯಾರಿ ನಡೆಸಿದ್ದರು. ಹೊಸ ಫರ್ನಿಚರ್ ತರಿಸಿಟ್ಟಿದ್ದರು. ಹೊಸ ಕಚೇರಿಯ ಉದ್ಘಾಟನೆಯನ್ನು ದಿನಾಂಕ 18 ರಂದು ನಿಗಧಿ ಮಾಡಿದ್ದರು. ಅಂದರೆ ಇನ್ನೆರಡು ದಿನದಲ್ಲಿ ಕಚೇರಿ ಉದ್ಘಾಟನೆಯಾಗಬೇಕಿತ್ತು. ಈಗ ರಾಜ್ಯ ಸರ್ಕಾರ ಆ ಕಚೇರಿಯನ್ನು ವಾಪಾಸ್ ಪಡೆದು ಶಾಕ್ ನೀಡಿದೆ.

ಐಬಿಯಲ್ಲಿ ನಾಲ್ಕು ಕೊಠಡಿಗಳಿಗೆ ಸರ್ಕಾರವೇ ಅನುಮತಿ ನೀಡಿತ್ತು. ಸರ್ಕಾರದಿಂದ ಅನುಮತಿ ಸಿಕ್ಕ ಬಳಿಕವೇ ಸೋಮಣ್ಣ ಅವರು ಎಲ್ಲಾ ರೀತಿಯ ತಯಾರಿ ನಡೆಸುತ್ತಿದ್ದರು. ಇದೀಗ ಕಚೇರಿ ಉಪಯೋಗಕ್ಕೆ ನೀಡಿದ ಅನುಮೋದನೆಯನ್ನು ಈ ಕೂಡಲೇ ವಾಪಾಸ್ ಪಡೆಯಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಶೇಖರ್ ಸೂಚನೆ ನೀಡಿದ್ದಾರೆ.

ವಿ ಸೋಮಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ತುಮಕೂರು ಜನತೆ ಅವರನ್ನು ಗೆಲ್ಲಿಸಿದ್ದರು. ಹೀಗಾಗಿ ತುಮಕೂರಿನಲ್ಲಿಯೇ ವಾಸವಿರುವ ವಿ ಸೋಮಣ್ಣ, ತುಮಕೂರಿನಲ್ಲಿಯೇ ಕಚೇರಿ ಮಾಡುವುದಕ್ಕೂ ತಯಾರಿ ನಡೆಸಿದ್ದರು. ಈಗ ರಾಜ್ಯ ಸರ್ಕಾರ ಹೀಗೆ ಶಾಕ್ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!