Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿ ಸೋಮಣ್ಣಗೆ ಬಿಗ್ ಶಾಕ್ : ಉದ್ಘಾಟನೆಗೆ ಎರಡು ದಿನ ಬಾಕಿ ಇರುವಾಗಲೇ ಕಚೇರಿ ವಾಪಾಸ್ ಪಡೆದ ಸರ್ಕಾರ..!

---Advertisement---

ತುಮಕೂರು: ವಿ ಸೋಮಣ್ಣ ಸದ್ಯ ತುಮಕೂರು ಜನರ ಆಶೀರ್ವಾದದಿಂದ ಗೆದ್ದು ಸಂಸದರಾಗಿದ್ದಾರೆ. ಅಷ್ಟೇ ಅಲ್ಲ ಕೇಂದ್ರ ಸಚಿವರು ಆಗಿದ್ದಾರೆ. ತುಮಕೂರಿನಲ್ಲಿ ಕಚೇರಿ ಉದ್ಘಾಟನೆ ಮಾಡುವುದಕ್ಕೆಂದು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಇದೀಗ ಆ ವಿಚಾರಕ್ಕೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

ತುಮಕೂರು ರೈಲ್ವೆ ಸ್ಟೇಷನ್ ಬಳಿ ಇರುವ ಐಬಿಯನ್ನು ಸೋಮಣ್ಣ ಅವರಿಗೆ ಕಚೇರಿ ಉಪಯೋಗಕ್ಕೆ ಕೊಡಲಾಗಿತ್ತು. ಹೀಗಾಗಿ ಸೋಮಣ್ಣ ಅವರು ಕೂಡ ಕಚೇರಿಯನ್ನು ಇನ್ನೊವೇಟ್ ಮಾಡುವುದಕ್ಕಾಗಿ ತಯಾರಿ ನಡೆಸಿದ್ದರು. ಹೊಸ ಫರ್ನಿಚರ್ ತರಿಸಿಟ್ಟಿದ್ದರು. ಹೊಸ ಕಚೇರಿಯ ಉದ್ಘಾಟನೆಯನ್ನು ದಿನಾಂಕ 18 ರಂದು ನಿಗಧಿ ಮಾಡಿದ್ದರು. ಅಂದರೆ ಇನ್ನೆರಡು ದಿನದಲ್ಲಿ ಕಚೇರಿ ಉದ್ಘಾಟನೆಯಾಗಬೇಕಿತ್ತು. ಈಗ ರಾಜ್ಯ ಸರ್ಕಾರ ಆ ಕಚೇರಿಯನ್ನು ವಾಪಾಸ್ ಪಡೆದು ಶಾಕ್ ನೀಡಿದೆ.

ಐಬಿಯಲ್ಲಿ ನಾಲ್ಕು ಕೊಠಡಿಗಳಿಗೆ ಸರ್ಕಾರವೇ ಅನುಮತಿ ನೀಡಿತ್ತು. ಸರ್ಕಾರದಿಂದ ಅನುಮತಿ ಸಿಕ್ಕ ಬಳಿಕವೇ ಸೋಮಣ್ಣ ಅವರು ಎಲ್ಲಾ ರೀತಿಯ ತಯಾರಿ ನಡೆಸುತ್ತಿದ್ದರು. ಇದೀಗ ಕಚೇರಿ ಉಪಯೋಗಕ್ಕೆ ನೀಡಿದ ಅನುಮೋದನೆಯನ್ನು ಈ ಕೂಡಲೇ ವಾಪಾಸ್ ಪಡೆಯಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಶೇಖರ್ ಸೂಚನೆ ನೀಡಿದ್ದಾರೆ.

ವಿ ಸೋಮಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ತುಮಕೂರು ಜನತೆ ಅವರನ್ನು ಗೆಲ್ಲಿಸಿದ್ದರು. ಹೀಗಾಗಿ ತುಮಕೂರಿನಲ್ಲಿಯೇ ವಾಸವಿರುವ ವಿ ಸೋಮಣ್ಣ, ತುಮಕೂರಿನಲ್ಲಿಯೇ ಕಚೇರಿ ಮಾಡುವುದಕ್ಕೂ ತಯಾರಿ ನಡೆಸಿದ್ದರು. ಈಗ ರಾಜ್ಯ ಸರ್ಕಾರ ಹೀಗೆ ಶಾಕ್ ನೀಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment