ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಎರಡನೇ ಅಂತರಾಷ್ಟ್ರೀಯ ನಿಲ್ದಾಣವಾಗಬೇಕು ಎಂದು ತೀರ್ಮಾನವಾದಾಗಿನಿಂದ ಸ್ಥಳ ನಿಗದಿಯದ್ದೇ ಬಹಳಷ್ಟು ಚರ್ಚೆಯಾಗುತ್ತಿದೆ. ಇದೀಗ ಆ ಬಗ್ಗೆ ಒಂದು ಬಿಗ್ ಅಪ್ಡೇಟ್ ಹೊರ ಬಿದ್ದಿದ್ದು, ಟಾಪ್ ಲೀಸ್ಟ್ ರೆಡಿಯಾಗಿದೆ. ಅದರಲ್ಲಿ ತುಮಕೂರು, ನೆಲಮಂಗಲ ಟಾಪ್ ಲೀಸ್ಟ್ ನಲ್ಲಿವೆ.
ಈ ಸಂಬಂಧ ಮಾತನಾಡಿರುವ ತುಮಕೂರು ಸಂಸದ ವಿ.ಸೋಮಣ್ಣ, ತುಮಕೂರು ಜಿಲ್ಲೆಯಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂಬುದು ನನ್ನ ಮೊದಲ ಸಲಹೆಯಾಗಿದೆ. ಇದಕ್ಕೆ ಪರ್ಯಾಯವಾಗಿ ಹೊಸ ಸೌಲಭ್ಯವನ್ನು ಬೆಂಗಳೂರಿನಲ್ಲಿ ಒದಗಿಸಬೇಕು. ಇದಕ್ಕಾಗಿ ಹಳೆ ಹೆಚ್ಎಎಲ್ ವಿಮಾನ ನಿಲ್ದಾಣವನ್ನು ಅಭಿವೃದ್ದಿ ಪಡಿಸಿ ಬಳಸಿಕೊಳ್ಳಬೇಕು. ತುಮಕೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರಬೇಕು.
ಬೆಂಗಳೂರಿನ ನಂತರ ತುಮಕೂರು ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ದಾಬಸ್ ಪೇಟೆ ಅಥವಾ ನೆಲಮಂಗಲದಲ್ಲಿಯೇ ನಿರ್ಮಿಸಲಿ. ಈ ವಿಷಯದಲ್ಲಿ ನಮಗೆ ಯಾವುದೇ ಆಕ್ಷೇಪಣೆ ಇಲ್ಲ. ಆದರೆ ಇದಕ್ಕಾಗಿ ರಾಜ್ಯ ಸರ್ಕಾರ ಬೇರೆ ಸ್ಥಳವನ್ನು ಆಯ್ಕೆ ಮಾಡಬಾರದು. ಈ ಸಂಬಂಧ ರಾಜ್ಯವಸರ್ಕಾರಕ್ಕೆ ಇದೇ ವಾರ ಪತ್ರ ಬರೆಯಲಾಗುವುದು ಎಂದಿದ್ದಾರೆ. ದಿನೇ ದಿನೇ ಬೆಂಗಳೂರು ಕೂಡ ಬೆಳೆಯುತ್ತಿದೆ. ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ ಮುಂದಿನ ದಿನಗಳಲ್ಲಿ ಜನಸಂದಣಿಯನ್ನು ಅನುಭವಿಸಬಹುದು. ಹೀಗಾಗಿ ರಾಜ್ಯ ಸರ್ಕಾರ ಈಗಲೇ ಆ ಬಗ್ಗೆ ಯೋಚಿಸಿ, ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯೋಜನೆ ಹಾಕಿದೆ. ಈಗ ಜಾಗವನ್ನ ಯಾವುದು ಫೈನಲ್ ಮಾಡಲಿದೆ ಎಂಬುದೇ ಕುತೂಹಲಕ್ಕೆ ಕಾರಣವಾಗಿದೆ. ಹೊಸೂರು ಕಡೆಗೆ ನಿಲ್ದಾಣ ಮಾಡಿ ಎಂಬ ಬೇಡಿಕೆಯೂ ಇದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್