Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2ನೇ ವಿಮಾನ ನಿಲ್ದಾಣದ ಬಿಗ್ ಅಪ್ಡೇಟ್ : ಟಾಪ್ ಲೀಸ್ಟ್ ನಲ್ಲಿ ತುಮಕೂರು, ನೆಲಮಂಗಲ..!

---Advertisement---

ಬೆಂಗಳೂರು: ಎರಡನೇ ಅಂತರಾಷ್ಟ್ರೀಯ ನಿಲ್ದಾಣವಾಗಬೇಕು ಎಂದು ತೀರ್ಮಾನವಾದಾಗಿನಿಂದ ಸ್ಥಳ ನಿಗದಿಯದ್ದೇ ಬಹಳಷ್ಟು ಚರ್ಚೆಯಾಗುತ್ತಿದೆ. ಇದೀಗ ಆ ಬಗ್ಗೆ ಒಂದು ಬಿಗ್ ಅಪ್ಡೇಟ್ ಹೊರ ಬಿದ್ದಿದ್ದು, ಟಾಪ್ ಲೀಸ್ಟ್ ರೆಡಿಯಾಗಿದೆ. ಅದರಲ್ಲಿ ತುಮಕೂರು, ನೆಲಮಂಗಲ ಟಾಪ್ ಲೀಸ್ಟ್ ನಲ್ಲಿವೆ.

ಈ ಸಂಬಂಧ ಮಾತನಾಡಿರುವ ತುಮಕೂರು ಸಂಸದ ವಿ.ಸೋಮಣ್ಣ, ತುಮಕೂರು ಜಿಲ್ಲೆಯಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂಬುದು ನನ್ನ ಮೊದಲ ಸಲಹೆಯಾಗಿದೆ. ಇದಕ್ಕೆ ಪರ್ಯಾಯವಾಗಿ ಹೊಸ ಸೌಲಭ್ಯವನ್ನು ಬೆಂಗಳೂರಿನಲ್ಲಿ ಒದಗಿಸಬೇಕು. ಇದಕ್ಕಾಗಿ ಹಳೆ ಹೆಚ್ಎಎಲ್ ವಿಮಾನ ನಿಲ್ದಾಣವನ್ನು ಅಭಿವೃದ್ದಿ ಪಡಿಸಿ ಬಳಸಿಕೊಳ್ಳಬೇಕು. ತುಮಕೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರಬೇಕು.

ಬೆಂಗಳೂರಿನ ನಂತರ ತುಮಕೂರು ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ದಾಬಸ್ ಪೇಟೆ ಅಥವಾ ನೆಲಮಂಗಲದಲ್ಲಿಯೇ ನಿರ್ಮಿಸಲಿ. ಈ ವಿಷಯದಲ್ಲಿ ನಮಗೆ ಯಾವುದೇ ಆಕ್ಷೇಪಣೆ ಇಲ್ಲ. ಆದರೆ ಇದಕ್ಕಾಗಿ ರಾಜ್ಯ ಸರ್ಕಾರ ಬೇರೆ ಸ್ಥಳವನ್ನು ಆಯ್ಕೆ ಮಾಡಬಾರದು. ಈ ಸಂಬಂಧ ರಾಜ್ಯವಸರ್ಕಾರಕ್ಕೆ ಇದೇ ವಾರ ಪತ್ರ ಬರೆಯಲಾಗುವುದು ಎಂದಿದ್ದಾರೆ. ದಿನೇ ದಿನೇ ಬೆಂಗಳೂರು ಕೂಡ ಬೆಳೆಯುತ್ತಿದೆ. ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ ಮುಂದಿನ ದಿನಗಳಲ್ಲಿ ಜನಸಂದಣಿಯನ್ನು ಅನುಭವಿಸಬಹುದು. ಹೀಗಾಗಿ ರಾಜ್ಯ ಸರ್ಕಾರ ಈಗಲೇ ಆ ಬಗ್ಗೆ ಯೋಚಿಸಿ, ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯೋಜನೆ ಹಾಕಿದೆ. ಈಗ ಜಾಗವನ್ನ ಯಾವುದು ಫೈನಲ್ ಮಾಡಲಿದೆ ಎಂಬುದೇ ಕುತೂಹಲಕ್ಕೆ ಕಾರಣವಾಗಿದೆ. ಹೊಸೂರು ಕಡೆಗೆ ನಿಲ್ದಾಣ ಮಾಡಿ ಎಂಬ ಬೇಡಿಕೆಯೂ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment