Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು : ಮೈತ್ರಿಗೆ ಸೋಲು..!

Facebook
Twitter
Telegram
WhatsApp

 

ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆ ನಡೆದಿದ್ರಿ, ಫಲಿತಾಂಶವೂ ಹೊರ ಬಿದ್ದಿದೆ. ಇಂದಿನ ಚುನಾವಣೆ ಕುತೂಹಲದತ್ತ ಸಾಗಿತ್ತು. ಜೆಡಿಎಸ್ ನಿಂದ ಐದನೇ ಅಭ್ಯರ್ಥಿ ಸ್ಪರ್ಧಿಸಿದ್ದ ಕಾರಣ ಒಂದಿಷ್ಟು ಆತಂಕವೂ ಕಾಂಗ್ರೆಸ್ ಗೆ ಶುರುವಾಗಿತ್ತು. ಆದರೆ ಈ ಎಲ್ಲದರ ನಡುವೆ ಆಡತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ ಮೂವರು ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

 

ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಂತ ಅಜಯ್ ಮಾಕನ್ -48, ನಾಸೀರ್ ಹುಸೇನ್ – 46, ಜಿ ಸಿ ಚಂದ್ರಶೇಖರ್ – 46 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಮೈತ್ರಿ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ನಾರಾಯಣ ಸಾ ಬಾಂಢಾಗೆ 47 ಮತ, ಕುಪೇಂದ್ರ ರೆಡ್ಡಿಗೆ 36 ಮತಗಳು ಸಿಕ್ಕಿವೆ. 47 ಮತ ಪಡೆದ ನಾರಾಯಣ ಬಾಂಢಾ ರಾಜ್ಯಸಭೆಗೆ ಮೊದಲ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದರೆ, ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಈ ಗೆಲುವನ್ನು ಕಾಂಗ್ರೆಸ್ ಸಂಭ್ರಮಿಸಿದೆ. ಸಿಹಿ ತಿನ್ನಿಸಿ, ಗೆದ್ದವರಿಗೆ ಹಾರ ಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ. ಗೆದ್ದವರ ಪರ ಘೋಷಣೆಗಳು ಕೇಳಿ ಬಂದಿವೆ. ಈ ಬಾರಿ ಕಾಂಗ್ರೆಸ್ ವಿರುದ್ಧ ಗೆಲ್ಲಲರೆಬೇಕೆಂದು ಸ್ಟಾಟರ್ಜಿ ರೂಪಿಸಿದ್ದ ಜೆಡಿಎಸ್ ಲೆಕ್ಕಚಾರ ಉಲ್ಟಾ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಕ್ಕಿದೆ. ವಿಧಾನಸಭಾ ಹಾಗೂ ರಾಜ್ಯಸಭೆಯಲ್ಲಿ ಗೆಲುವು ಪಡೆದು ಸಂತಸದಲ್ಲಿರುವ ಕಾಂಗ್ರೆಸ್ ಈಗ ಲೋಕಸಭೆಗೆ ತಯಾರಿ ನಡೆಸಬೇಕಿದೆ. ಅಲ್ಲಿಯೂ ಗೆಲ್ಲುವ ತಂತ್ರಗಾರಿಕೆ ಬಳಕೆ ಮಾಡುತ್ತಾ ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!