Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿವಮೊಗ್ಗದಲ್ಲಿ ರಾಘವೇಂದ್ರಗೆ ಭರ್ಜರಿ ಗೆಲುವು.. ಗೀತಾ ಶಿವರಾಜ್ ಕುಮಾರ್ ಗಿಂತ ಕಡಿಮೆ ಮತ ಪಡೆದರಾ ಈಶ್ವರಪ್ಪ..?

---Advertisement---

ಶಿವಮೊಗ್ಗ: ಲೋಕಸಭಾ ರಣಕಣದಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ 17 ಕ್ಷೇತ್ರಗಳನ್ನು ತಮ್ಮದಾಗಿಸಿಕೊಂಡರೆ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ. ಇನ್ನು ಜೆಡಿಎಸ್ ಸ್ಪರ್ಧಿಸಿದ್ದ ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಗೆದ್ದಿದೆ. ಶಿವಮೊಗ್ಗದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಒಂದು ಕಡೆ ಬಂಡಾಯವೆದ್ದಿದ್ದ ಈಶ್ವರಪ್ಪ ಎದುರು ಬಿವೈ ರಾಘವೇಂದ್ರ ಅವರು 1.70 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಕಳೆದ ನಾಲ್ಕು ಚುನಾವಣೆಯಲ್ಲೂ ಬಿವೈ ರಾಘವೇಂದ್ರ ಅವರೇ ಸಂಸದರಾಗಿ ಆಯ್ಕೆಯಾಗುತ್ತಿದ್ದಾರೆ. ಇಂದು ಆರಂಭಿಕ ಮತ ಎಣಿಕೆಯಿಂದಾನು ಮುನ್ನಡೆ ಕಾಯ್ದುಕೊಂಡಿದ್ದ ರಾಘವೇಂದ್ರ ಅವರು ಕಡೆಗೂ ಭರ್ಜರಿ ಗೆಲುವನ್ನೇ ಸಾಧಿಸಿದ್ದಾರೆ. ಇನ್ನು ಗೀತಾ ಶಿವರಾಜ್ ಕುಮಾರ್ ಅವರು ಎರಡನೇ ಬಾರಿಗೆ ಬಿಜೆಪಿ ಎದುರು ಸೋಲು ಕಂಡಿದ್ದಾರೆ. ಶಿವರಾಜ್ಕುಮಾರ್ ಸೇರಿದಂತೆ ಸ್ಯಾಂಡಲ್ ವುಡ್ ನಟ ನಟಿಯರು ಕೂಡ ಬಂದು ಮತ ಕೇಳಿದ್ದರು. ಆದರೂ ಗೀತಾ ಶಿವ ರಾಜ್‍ಕುಮಾರ್ 404570 ಮತಗಳನ್ನು ಪಡೆಯುವ ಮೂಲಕ ಸೋಲು ಕಂಡಿದ್ದಾರೆ.

ಇನ್ನು ಈ ಬಾರಿ ಮಗನಿಗೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ವಿರುದ್ದವೇ ಬಂಡಾಯವೆದ್ದಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಬಿಜೆಪಿ ಕೂಡ ಈಶ್ವರಪ್ಪ ಅವರನ್ನು ಪಕ್ಷದಿಂದ ವಜಾ ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ದಂಗೆ ಎದ್ದಿದ್ದ ಈಶ್ವರಪ್ಪ, ಬಿಎಸ್ವೈ ಪುತ್ರನ ವಿರುದ್ಧವೇ ಸೋತಿದ್ದಾರೆ. ಅದರಲ್ಲೂ ಗೀತ ಶಿವರಾಜ್ ಕುಮಾರ್ ಅವರಿಗಿಂತ ಕಡಿಮೆ ಮತಗಳಿಂದ ಸೋತಿದ್ದಾರೆ. ಈಶ್ವರಪ್ಪ ಅವರಿಗೆ ಬಿದ್ದ ಮತಗಳು ಕೇವಲ 21,920 ಮಾತ್ರ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment