Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದುವೆಯಾದ ಬಿಗ್ ಬಾಸ್ ಸಿರಿ : ‘ಬದುಕು’ ಧಾರಾವಾಹಿಯಲ್ಲಿ ನಟಿಸಿದ್ದ ನಟನನ್ನೇ ಮದುವೆಯಾದ ನಟಿ

---Advertisement---

ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿ ಬಂದಿದ್ದ ಸಿರಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ತಮ್ಮದೇ ಸೀರಿಯಲ್ ನಲ್ಲಿ ನಟಿಸಿದ್ದ ನಟನನ್ನು ವರಿಸಿದ್ದಾರೆ. ನಂದಿಬೆಟ್ಟದ ತಪ್ಪಲಿನ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಕುಟುಂಬಸ್ಥರು, ಆಪ್ತರಷ್ಟೇ ಈ ಮದುವೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ಸಿರಿಗೆ ಮದುವೆ ವಿಚಾರ ಎದುರಾಗಿತ್ತು. ಅತಿಥಿಯಾಗಿ ತಾರಾ ಹೋಗಿದ್ದಾಗ ಮದುವೆ ಬಗ್ಗೆ ಅಭಿಪ್ರಾಯ ಕೇಳಿದ್ದರು. ಆಗಬಾರದು ಅಂತ ಏನಿಲ್ಲ, ಪರ್ಫೆಕ್ಟ್ ಆಗಿರುವ ಪಾಟ್ನರ್ ಬೇಕು. ನಾನಂತು ನನ್ನ ವೃತ್ತಿ ಬಿಡುವುದಿಲ್ಲ. ಅದಕ್ಕೆ ಬೆಂಬಲವಾಗಿ ನಿಲ್ಲುವಂತ ಹುಡುಗ ಬೇಕು ಎಂದಿದ್ದರು. ಆದಷ್ಟು ಬೇಗ ಆ ರೀತಿಯ ಹುಡುಗ ಸಿಗಲಿ, ಮದುವೆಯಾಗಲಿ ಎಂದೇ ಎಲ್ಲರೂ ಹಾರೈಸಿದ್ದರು. ಎಲ್ಲರ ಹಾರೈಕೆ ಫಲಿಸಿದೆ, ಸರಳವಾಗಿ ವೈವಾಹಿಕ ಜೀವನಕ್ಕೆ ಸಿರಿ ಕಾಲಿಟ್ಟಿದ್ದಾರೆ.

ಪ್ರಭಾಕರ್ ಬೋರೇಗೌಡ ಎಂಬುವವರನ್ನು ಸಿರಿ ಮದುವೆಯಾಗಿದ್ದಾರೆ. ಇವರು ನಟ ಮತ್ತು ಉದ್ಯಮಿಯಾಗಿದ್ದಾರೆ. ಮೂಲತಃ ಮಂಡ್ಯ ಮೂಲದವರಾಗಿದ್ದು, ಕುಟುಂಬದ ಜೊತೆಗೆ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ. ನಿನ್ನೆ ಬೆಳಗ್ಗೆ ನಂದಿ ಬೆಟ್ಟದ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದರು.

ಕೆಲವೊಮಂದು ಮೂಲಗಳ ಪ್ರಕಾರ ಪ್ರಭಾಕರ್ ಈ ಹಿಂದೆ ಬದುಕು ಧಾರಾವಾಹಿಯಲ್ಲಿ ಜೊತೆಗೆ ಕೆಲಸ ಮಾಡಿದ್ದರು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಸಿರಿ ಹೊಸ ಬದುಕಿಗೆ ಕಾಲಿಟ್ಟಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಮತ್ತು ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳು ನೆಚ್ಚಿನ ನಟಿಯ ಮದುವೆಗೆ ಶುಭಕೋರುತ್ತಿದ್ದಾರೆ. ಸಾಂಸಾರಿಕ ಜೀವನ ಸುಖವಾಗಿರಲೆಂದು ಹಾರೈಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment