Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಪ್ರಯುಕ್ತ ಸೆ 15 ರಂದು ಬೈಕ್‍ರ್ಯಾಲಿ :  ಪ್ರಭಂಜನ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ವಿಶ್ವಹಿಂದು ಪರಿಷತ್ ಭಜರಂಗದಳದ ವತಿಯಿಂದ ನಗರದಲ್ಲಿ ಪ್ರತಿಷ್ಟಾಪಿಸಲಾಗಿರುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಅಂಗವಾಗಿ ಸಮಸ್ತ ಹಿಂದೂ ಬಾಂಧವರನ್ನು ಜಾಗೃತಿಗೊಳಿಸುವುದಕ್ಕಾಗಿ ಸೆ.15 ರಂದು ನಗರದಲ್ಲಿ ಬೈಕ್‍ರ್ಯಾಲಿ ಸಂಚರಿಸಲಿದೆ ಎಂದು ಭಜರಂಗದಳ ಶಿವಮೊಗ್ಗ ವಿಭಾಗದ ಸಂಚಾಲಕ ಪ್ರಭಂಜನ್ ಎಸ್.ಆರ್.ತಿಳಿಸಿದರು.

ನಗರದ ಪಂಚಾಚಾರ್ಯ ಕಲ್ಯಾಣ ಮಂಟಪ ಪಕ್ಕದಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿರುವ ಜೈನ್‍ಧಾಮದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಬೈಕ್‍ರ್ಯಾಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮುಕ್ತಾಯಗೊಳ್ಳಲಿದೆ. ಹದಿನೇಳರಂದು ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ವಿವಿಧ ಕಲಾ ತಂಡಗಳು ಯಾತ್ರೆಯಲ್ಲಿ ಭಾಗವಹಿಸಲಿವೆ. ಚಂಡೆ ಮೃದಂಗ, ಯಕ್ಷಗಾನ ಕೂಡ ಯಾತ್ರೆಗೆ ಆಗಮಿಸಲಿದೆ ಎಂದು ಹೇಳಿದರು.

ವಿಶ್ವಹಿಂದು ಪರಿಷತ್ ಅಖಿಲ ಭಾರತೀಯ ಸಹ ಕಾರ್ಯದರ್ಶಿ ಅಂಬರೀಶ್ ಸಿಂಗ್ ಶೋಭಾಯಾತ್ರೆ ಉದ್ಘಾಟಿಸಲಿದ್ದಾರೆ. ಹದಿಮೂರರಂದು ಬೆಳಿಗ್ಗೆ 9 ಗಂಟೆಗೆ ನವದುರ್ಗೆಯರು ಸಿಹಿ ನೀರು ಹೊಂಡದಿಂದ ಗಂಗೆ ಪೂಜೆಯೊಂದಿಗೆ ಹೊರಟು ಹಿಂದೂ ಮಹಾಗಣಪತಿ ಬಳಿ ಬರುತ್ತಾರೆ. ಗಣಹೋಮ, ನವಗ್ರಹ ಹೋಮ, ಸುದರ್ಶನ ಹೋಮವಿರುತ್ತದೆ ಎಂದರು.

ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಭದ್ರಿನಾಥ್ ಮಾತನಾಡಿ ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕಾಗಿ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಸರಳವಾಗಿತ್ತು. ಆದರೆ ಈ ಬಾರಿಯ ಬೃಹತ್ ಶೋಭಾಯಾತ್ರೆ ವರ್ಣರಂಜಿತವಾಗಿ ನಡೆಯಲಿದೆ. ಲಕ್ಷಾಂತರ ಭಕ್ತರು ಯಾತ್ರೆಯಲ್ಲಿ ಭಾಗವಹಿಸುತ್ತಿರುವುದರಿಂದ ಅನೇಕ ಕಲಾ ತಂಡಗಳು ಯಾತ್ರೆಯಲ್ಲಿ ಭಕ್ತರನ್ನು ರಂಜಿಸಲಿವೆ. ಯಾತ್ರೆಗೆ ಎರಡು ದಿನದ ಮುನ್ನ ಸೆ.15 ರಂದು ಚಿತ್ರದುರ್ಗದಲ್ಲಿ ಬೃಹತ್ ಬೈಕ್‍ರ್ಯಾಲಿ ನಡೆಸಿ ಸಮಸ್ತ ಹಿಂದೂಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗುವುದು ಎಂದು ಹೇಳಿದರು.

ಹದಿಮೂರರಂದು ಗ್ರಾಮದೇವತೆಗಳಾದ ನವದುರ್ಗೆಯರು ಹಿಂದೂ ಮಹಾಗಣಪತಿ ಬಳಿ ಬರಲಿದ್ದಾರೆ. ಹಾಗಾಗಿ ಅಂದು ಹೋಮ ನೆರವೇರಲಿದೆ ಎಂದು ಬೃಹತ್ ಶೋಭಾಯಾತ್ರೆ ಕುರಿತು ಮಾಹಿತಿ ನೀಡಿದರು.

ಭಾರತೀಯ ಜೈನ್ ಸಂಘಟನ್ ಅಧ್ಯಕ್ಷ ಹಾಗೂ ವಿಫುಲ್ ಟೆಕ್ಸ್‍ಟೈಲ್ಸ್‍ನ ವಿಪುಲ್‍ಜೈನ್, ವಿಶ್ವಹಿಂದು ಪರಿಷತ್ ಶಿವಮೊಗ್ಗ ವಿಭಾಗ ಕಾರ್ಯದರ್ಶಿ ಷಡಾಕ್ಷರಪ್ಪ ಡಿ.
ಭಜರಂಗದಳದ ಜಿಲ್ಲಾ ಸಂಚಾಲಕ ಪಿ.ಸಂದೀಪ್, ಶರಣ್‍ಕುಮಾರ್, ರುದ್ರೇಶ್, ರೋಹಿತ್‍ಗಾಯಕ್‍ವಾಡ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ಈಶ್ವರಪ್ಪ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ತನ್ನ ಮಗನಿಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!