ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು ಸಹ, ಜಾಮೀನು ಸಿಕ್ಕಿರಲಿಲ್ಲ. ಶರಣಾಗತಿಯೊಂದೆ ಉಳಿದಿತ್ತು. ಇದೀಗ ಪೊಲೀಸರು ಭೈರತಿ ಬಸವರಾಜ್ ಅವರನ್ನ ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಶಾಸಕರ ಬಂಧನವಾಗಿದೆ.
ಭೈರತಿ ಬಸವರಾಜ್ ಅವರ ಕುಮ್ಮಕ್ಕಿನಿಂದಾನೇ ಬಿಕ್ಲು ಶಿವನ ಕೊಲೆಯಾಗಿದೆ ಎಂದು ಪೊಲೀಸರು ಆರೋಪಿಸಿದ್ದರು. ಹೀಗಾಗಿ ಕೋರ್ಟ್ ನಲ್ಲಿ ಜಾಮೀನು ಕೂಡ ಸಿಕ್ಕಿರಲಿಲ್ಲ. ಬಂಧನಕ್ಕೂ ಸುಲಭವಾಗಿತ್ತು. ಗುಜರಾತ್ ನಿಂದ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆಯೇ ಪೊಲೀಸರು ಕೂಡ ಅರೆಸ್ಟ್ ಮಾಡಿದ್ದಾರೆ.
ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರು ಕೂಡ ಆರೋಪಿಯಾಗಿದ್ದರು. ಹೀಗಾಗಿ ಪೊಲೀಸರು ಯಾವ ಕ್ಷಣದಲ್ಲಿ ಬೇಕಾದರೂ ಅರೆಸ್ಟ್ ಮಾಡುವ ಸಾಧ್ಯತೆ ಇತ್ತು. ಈ ವಿಚಾರ ತಿಳಿದ ಶಾಸಕರು ಫೋನ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದರು. ಇನ್ನು ಸೆರಂಡರ್ ಆಗದೆ ಬೇರೆ ವಿಧಿ ಇಲ್ಲ ಎಂದು ತಿಳಿದ ಮೇಲೆ ಬೆಂಗಳೂರಿನ ಕಡೆಗೆ ಬಂದಿದ್ದರು. ಈಗ ಪೊಲೀಸರ ಅತಿಥಿಯಾಗಿದ್ದಾರೆ ಶಾಸಕರು. ಮುಂದಿನ ದಿನಗಳಲ್ಲಿ ಜಾಮೀನು ಸಿಗುತ್ತಾ ಅಥವಾ ಜೈಲಲ್ಲಿ ಲಾಕ್ ಆಗ್ತಾರಾ ಎಂಬುದು ತನಿಖೆಯ ನಂತರ ತಿಳಿಯಲಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್