ಹುಟ್ಟುಹಬ್ಬದ ವಿಶೇಷ : 25 ರೈತರಿಗೆ ಟ್ರ್ಯಾಕ್ಟರ್ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

suddionenews
1 Min Read

ಬೆಂಗಳೂರು: ಇಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಜನ್ಮ ದಿನದ ಸಂಭ್ರಮ. ಈ ದಿನವನ್ನ ವಿಶೇಷವಾಗಿ ಆಚರಿಸಿದ್ದಾರೆ. ರೈತ ನಾಯಕ ಎಂತಲೂ ಕರೆಸಿಕೊಳ್ಳುವ ಯಡಿಯೂರಪ್ಪ ಅವರು ಅವರ ಹುಟ್ಟುಹಬ್ಬಕ್ಕೆ ರೈತರಿಗೆ ಅವರೇ ಉಡುಗೊರೆ ನೀಡಿದ್ದಾರೆ.

ರೈತರಿಗೆ ಟ್ರ್ಯಾಕ್ಟರ್ ನೀಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಬೆಳಗ್ಗೆಯಿಂದಲೂ ಅವರ ಅಭಿಮಾನಿ ಬಳಗ, ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಎಲ್ಲರೂ ಸ್ಪೆಷಲ್ ವಿಶ್ ಮಾಡಿದ್ದಾರೆ. ಕುಟುಂಬಸ್ಥರು, ಬೆಂಬಲಿಗರ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ಇನ್ನು ಇದೇ ವೇಳೆ ರಷ್ಯಾ – ಉಕ್ರೇನ್ ಯುದ್ಧದ ಬಗ್ಗೆ ಮಾತನಾಡಿದ ಯಡಿಯೂರಪ್ಪ ಅವರು, ಭಾರತೀಯರನ್ನು ಕರೆತರುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಪೋಷಕರು ಹಾಗೂ ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಧೈರ್ಯದಿಂದ ಇರಬೇಕು. ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುತ್ತೆ. ಮೋದಿಜೀ ಸಹಕಾರ ನೀಡುತ್ತಿದ್ದಾರೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *