Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಟ್ ಕಾಯಿನ್ ಪ್ರಕರಣ ಸರ್ಕಾರಕ್ಕೆ ಕಂಟಕವಾಗಬಹುದು: ರಾಮಲಿಂಗ ರೆಡ್ಡಿ

Facebook
Twitter
Telegram
WhatsApp

ಬೆಂಗಳೂರು: ಬಿಟ್ ಕಾಯಿನ್ ದಂಧೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ರಾಜ್ಯದ ಇಬ್ಬರು ಪ್ರಭಾವಿ ನಾಯಕರ ಭಾಗಿ ಬಗ್ಗೆ ವರದಿ ನೋಡಿದ್ದೆ. ಸುಮಾರು 10 ಸಾವಿರ ಕೋಟಿ ವಹಿವಾಟಿನ ಅನುಮಾನ ಇದೆ. ಇದು ಪ್ರಧಾನಿ ಕಾರ್ಯಾಲಯಕ್ಕೆ ಹೋಗಿದ್ದು, ಅಲ್ಲಿಂದ ವರದಿ ಕೇಳಲಾಗಿದೆ. ಈ ಬಿಟ್ ಕಾಯಿನ್ ಪ್ರಕರಣ ಸರ್ಕಾರಕ್ಕೆ ಕಂಟಕವಾಗಬಹುದು ಎಂದು ಭಾವಿಸುತ್ತೇನೆ ಅಂತ ಶಾಸಕ ರಾಮಲಿಂಗ ರೆಡ್ಡಿ ಹೇಳಿದರು.

ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈ ಬಗ್ಗೆ ಟ್ವಿಟ್ ಮಾಡಿದ್ದಾರೆ. ಈ ಪ್ರಕರಣದ ತನಿಖೆ ಸತ್ಯಾಂಶ ಹೊರಬಂದರೆ, ಅನೇಕ ನಾಯಕರ ಕುರ್ಚಿ ಅಲುಗಾಡುತ್ತದೆ. ಶೀಕ್ರಿ ಅವರನ್ನು ಬಂಧಿಸಲು ಸರ್ಕಾರ ಹಿಂದುಮುಂದೆ ನೋಡಿದ್ದು ಯಾಕೆ? ಈ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡೆಸಬೇಕು. ಉಳಿದ ಯಾವುದೇ ತನಿಖಾ ಸಂಸ್ಥೆ ಮೇಲೆ ನಂಬಿಕೆ ಇಲ್ಲವಾಗಿದೆ ಎಂದರು.

ರಾಜ್ಯ ಸರ್ಕಾರ ಕನ್ನಡಕ್ಕಾಗಿ ನಾವು ಎಂದು ಕಾರ್ಯಕ್ರಮ ನಡೆಸುತ್ತಿದೆ. ಆದರೆ ಪ್ರವಾಸೋದ್ಯಮ ಸಚಿವಾಲಯ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆಯಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಈ ಕಾರ್ಯಕ್ರಮ ಒಳ್ಳೆಯದೇ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಎಲ್ಲರೂ ಬರೆಯಲು, ಓದಬೇಕು’ ಎಂದರು.

ಬೊಮ್ಮಾಯಿ ಅವರು ಸಿಎಂ ಆಗಿ 100 ದಿನ ಪೂರೈಸುತ್ತಿದ್ದು, ಸಂಭ್ರಮಾಚರಣೆಗೆ ಮುಂದಾಗಿದ್ದಾರೆ ಎಂಬ ಬಗ್ಗೆ ಕೇಳಿದಾಗ, ‘ಬೊಮ್ಮಾಯಿ ಅವರು ಏನು ಮಾಡಿದ್ದಾರೆ ಅಂತಾ 100 ದಿನದ ಸಂಭ್ರಮ ಮಾಡುತ್ತಿದ್ದಾರೆ. ಅವರ ಸಾಧನೆ ಏನು ಎಂದು ಮಾಧ್ಯಮಗಳು ದಿನನಿತ್ಯ ತೋರಿಸುತ್ತಿವೆ’ ಎಂದರು.

ಉಪಚುನಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾಂಗ್ರೆಸ್ ಎರಡೂ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿ ಕಣಕ್ಕಿಳಿಸಿದ್ದು, ಪಕ್ಷ ಗೆಲ್ಲುವ ವಿಶ್ವಾಸವಿದೆ. ಚುನಾವಣೆಯಲ್ಲಿ ಬೆಲೆ ಏರಿಕೆ ಬಹುತೇಕ ಚರ್ಚೆಯಾಗಿದ್ದು, ಜನ ಸರ್ಕಾರದ ವಿರುದ್ಧ ಬೆಲೆ ಏರಿಕೆ ವಿಚಾರವಾಗಿ ಬೇಸತ್ತಿದ್ದಾರೆ. ಬೆಲೆ ಏರಿಕೆ ವಿರುದ್ಧ ಜನ ಆಕ್ರೋಶ ಹೊರಹಾಕುತ್ತಿದ್ದರು’ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!