ಬೆಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಇನ್ನೇನು ಕೆಪವೇ ದಿನಗಳಲ್ಲಿ ಅನೌನ್ಸ್ ಆಗಲಿದೆ. ಅಷ್ಟರ ಒಳಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ರಿಲೀಸ್ ಮಾಡಬೇಕಿದೆ. ಟಿಕೆಟ್ ಗಾಗಿಯೇ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಬಿಜೆಪಿಯಿಂದ ಮೊದಲ ಪಟ್ಟಿ ರಿಲೀಸ್ ಆಗಿದ್ದು, ಇದೀಗ ಇಂದು ಎರಡನೇ ಪಟ್ಟಿ ರಿಲೀಸ್ ಆಗಿದೆ. ಎರಡನೇ ಪಟ್ಟಿಯಲ್ಲಿ ಘಾಟಾನುಘಟಿ ನಾಯಕರಿಗೆ ಟಿಕೆಟ್ ಮಿಸ್ ಆಗಿದೆ.
ಬಿಜೆಪಿಯಿಂದ ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್ ಅನೌನ್ಸ್ ಮಾಡಿದೆ. ಅದರಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇನ್ನು ಮಂಡ್ಯ, ಹಾಸನ, ಕೋಲಾರವನ್ನು ಬಿಜೆಪಿ, ಜೆಡಿಎಸ್ ಗೆ ಬಿಟ್ಟುಕೊಡುವ ಎಲ್ಲಾ ಸಾಧ್ಯತೆಗಳು ಇದೆ. ಹೀಗಾಗಿ ಇನ್ನುಳಿದಂತೆ ಚಿತ್ರದುರ್ಗ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಬಾಕಿ ಉಳಿಸಿದೆ.
ಸದ್ಯಕ್ಕೆ ಕೆಳಗೆ ಸೂಚಿಸಿರುವ ನಾಯಕರಿಗೆ ಟಿಕೆಟ್ ಮಿಸ್ ಆಗಿದೆ.
ಮೈಸೂರು – ಪ್ರತಾಪ ಸಿಂಹ
ಬೆಂಗಳೂರು ಉತ್ತರ – ಡಿ.ವಿ ಸದಾನಂದಗೌಡ
ಉತ್ತರ ಕನ್ನಡ – ನಳೀನ್ ಕುಮಾರ್ ಕಟೀಲ್
ಕೊಪ್ಪಳ – ಸಂಗಣ್ಣ ಕರಡಿ
ತುಮಕೂರು – ಜಿ.ಎಸ್ ಬಸವರಾಜ್
ಚಾಮರಾಜನಗರ – ವಿ. ಶ್ರೀನಿವಾಸ ಪ್ರಸಾದ್ ಟಿಕೆಟ್ ತಪ್ಪಿದೆ.
ಮೈಸೂರು- ಯದುವೀರ್ ಕೃಷ್ಣದತ್ತ್ ಒಡೆಯರ್

ಬ್ರಿಜೇಶ್ ಚೌಟಾ – ಉತ್ತರ ಕನ್ನಡ
ಡಾ.ಬಸವರಾಜ್ – ಕೊಪ್ಪಳ
ತುಮಕೂರು – ವಿ ಸೋಮಣ್ಣ
ಚಾಮರಾಜನಗರ – ಎಸ್ ಬಾಲರಾಜು ಅವರಿಗೆ ಟಿಕೆಟ್ ನೀಡಲಾಗಿದೆ. ಉಳಿದಂತೆ ಚಿಕ್ಕೋಡಿಗೆ ಅಣ್ಣ ಸಾಹೇಬ್ ಶಂಕರ್, ಬಾಗಲಕೋಟೆ – ಪಿಸಿ ಗಡ್ಡಿಗೌಡರ್, ಕಲಬುರ್ಗಿ ಉಮೇಶ್ ಜಾದವ್, ಬೀದರ್ – ಭಗವಂತ ಖೂಬಾ, ಬಳ್ಳಾರಿ – ಶ್ರೀರಾಮುಲು, ಹಾವೇರಿ – ಬಸವರಾಜ್ ಬೊಮ್ಮಾಯಿ, ಧಾರವಾಡ – ಪ್ರಹ್ಲಾದ್ ಜೋಶಿ, ದಾವಣಗೆರೆ – ಗಾಯತ್ರಿ ಸಿದ್ದೇಶ್ವರ್, ಶಿವಮೊಗ್ಗ – ಬಿ ವೈ ರಾಘವೇಂದ್ರ, ಉಡುಪಿ – ಚಿಕ್ಕಮಗಳೂರು – ಕೋಟಾ ಶ್ರೀನಿವಾಸ ಪೂಜಾರಿ, ಬೆಂಗಳೂರು ಗ್ರಾಮಾಂತರ – ಡಾ. ಸಿ ಎನ್ ಮಂಜುನಾಥ್, ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ, ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ, ಬೆಂಗಳೂರು ಸೆಂಟ್ರಲ್ – ಪಿಸಿ ಮೋಹನ್ ಗೆ ಟಿಕೆಟ್ ನೀಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















