ಹ್ಯೂಬ್ಲೋಟ್ ವಾಚ್ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮತ್ತೆ ಪ್ರಶ್ನೆ ಮಾಡಿದ ಬಿಜೆಪಿ..!

suddionenews
1 Min Read

ಬೆಂಗಳೂರು: 40% ಕಮಿಷನ್ ವಿಚಾರಕ್ಕೆ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಚಾಲೆಂಜ್ ಹಾಕಿದ್ದರು.‌ ನಾನು ಮುಖ್ಯಮಂತ್ರಿಯಾಗಿದ್ದಾಗ ಎನ್ಒಸಿಗಾಗಿ ಗುತ್ತಿಗೆದಾರರು ಒಂದು ರೂಪಾಯಿ ಕೊಟ್ಟಿಲ್ಲ. ಕೊಟ್ಟಿದ್ದಾರೆಂದು ಸಾಬೀತು ಪಡಿಸಿದರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆಂದು ಸವಾಲು ಹಾಕಿದ್ದರು.

ಅದಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ. ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಮಾನ್ಯ @siddaramaiah ಅವರೇ, ನೀವು ರಾಜಕೀಯ ನಿವೃತ್ತಿ ನೀಡಬೇಡಿ. ದೇಶಾದ್ಯಂತ ಕಾಂಗ್ರೆಸ್ ಹಡಗನ್ನು ಮುಳುಗಿಸಲು ನಿಮ್ಮಂತಹ ನಾಯಕರ ಅಗತ್ಯವಿದೆ. ಅಂದ ಹಾಗೆ ನೀವು ನಯಾಪೈಸೆ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ದೀರಿ. ಹಾಗಾದರೆ ಹ್ಯೂಬ್ಲೋಟ್ ವಾಚ್ ಬಂದಿದ್ದೆಲ್ಲಿಂದ?.

ಮುಖ್ಯಮಂತ್ರಿಯಾಗಿದ್ದಾಗ @siddaramaiah ಅವರು ತಮ್ಮ ಸುತ್ತಲೂ ಭ್ರಷ್ಟರ ದಂಡನ್ನೇ ಇಟ್ಟುಕೊಂಡಿದ್ದರು. ಸಿದ್ದರಾಮಯ್ಯ ಅವರ ಆತ್ಮೀಯರೆಲ್ಲರ ಮೇಲೂ ಕಪ್ಪ ಹಣ ಸಂಗ್ರಹಣೆ ಆರೋಪವಿತ್ತು. ಸಿದ್ದರಾಮಯ್ಯನವರೇ, ನಿಮ್ಮ ಸಲಹೆಗಾರರೊಬ್ಬರ ಐಟಿ ದಾಳಿಯಾದಾಗ ರಾತ್ರಿ ಬಂದು ನಿಮ್ಮ ಮುಂದೆ ಕಣ್ಣೀರು ಸುರಿಸಿದ್ದು ನೆನಪಿದೆಯೇ? ಅದಕ್ಕೇನು ಹೇಳುತ್ತೀರಿ?.

ಮುಖ್ಯಮಂತ್ರಿಯಾಗಿದ್ದಾಗ @siddaramaiah ಅವರು ತಮ್ಮ ಸುತ್ತಲೂ ಭ್ರಷ್ಟರ ದಂಡನ್ನೇ ಇಟ್ಟುಕೊಂಡಿದ್ದರು. ಸಿದ್ದರಾಮಯ್ಯ ಅವರ ಆತ್ಮೀಯರೆಲ್ಲರ ಮೇಲೂ ಕಪ್ಪ ಹಣ ಸಂಗ್ರಹಣೆ ಆರೋಪವಿತ್ತು. ಸಿದ್ದರಾಮಯ್ಯನವರೇ, ನಿಮ್ಮ ಸಲಹೆಗಾರರೊಬ್ಬರ ಐಟಿ ದಾಳಿಯಾದಾಗ ರಾತ್ರಿ ಬಂದು ನಿಮ್ಮ ಮುಂದೆ ಕಣ್ಣೀರು ಸುರಿಸಿದ್ದು ನೆನಪಿದೆಯೇ? ಅದಕ್ಕೇನು ಹೇಳುತ್ತೀರಿ? ಎಂದು ಟ್ವೀಟ್ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *