Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಂಧಗಿಗೆ ಜೆಡಿಎಸ್‌ ಕೊಡುಗೆ ಬಿಟ್ಟರೆ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳದ್ದು ಶೂನ್ಯ: ಹೆಚ್ಡಿಕೆ

Facebook
Twitter
Telegram
WhatsApp

*ಸಿಂಧಗಿಗೆ ಜೆಡಿಎಸ್‌ ಕೊಡುಗೆ ಬಿಟ್ಟರೆ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳದ್ದು ಶೂನ್ಯ: ಹೆಚ್ಡಿಕೆ*

ವಿಜಯಪುರ:ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇಂದು ಮಾಧ್ಯಮಗಳ ಮಾತನಾಡಿದ ಅವರು,
ಒಂದೆಡೆ ಮುಸ್ಲೀಮರನ್ನು ದೇಶದಿಂದಲೇ ಓಡಿಸಬೇಕು ಎಂದು ಎನ್ನುವ ಬಿಜೆಪಿ, ಇನ್ನೊಂದೆಡೆ ಅವರಿಗೆ ನಾವೂ ಸಹಾಯ ಮಾಡಿದ್ದೇವೆ. ನಮಗೆ ವೋಟು ಕೊಡಬೇಕು ಎಂದು ಕೇಳುತ್ತಿದೆ. ದ್ವಿಮುಖ ನೀತಿ ಎಂದರೆ ಇದುವೇ ಎಂದು ಕಿಡಿಕಾರಿದರು.

ಮುಸ್ಲೀಮರು ನಮ್ಮ ಪರ ಇರಬೇಕು ಎನ್ನುವ ಬಿಜೆಪಿ, ಅವರನ್ನು ಸಮಾನವಾಗಿ ನೋಡಬೇಕಲ್ಲವೇ? ಹಾಗೆ ಮಾಡದೇ ಮತ ಮಾತ್ರ ಹಾಕಬೇಕು ಎಂದು ಕೇಳಿದರೆ ಹೇಗೆ? ಎಂದು ಹೆಚ್‌ಡಿಕೆ ಖಾರವಾಗಿ ಪ್ರಶ್ನಿಸಿದರು.

ಬಿಜೆಪಿಯವರು ಮಾತ್ರ ಹಿಂದುಗಳಾ? ನಾವೇನು ಹೊರಗಿನಿಂದ ಬಂದಿದ್ದೇವೆಯಾ? ನಮಗೂ ಹಿಂದುತ್ವವಿದೆ, ನಂಬಿಕೆ-ಶ್ರದ್ಧೆಗಳಿವೆ. ಆದರೆ ನಾವು ಎಲ್ಲರನ್ನೂ ಒಳಗೊಂಡು ರಾಜಕೀಯ ಮಾಡಿದರೆ, ಬಿಜೆಪಿಯವರು ಕೇವಲ ಹಿಂದುತ್ವದ ಆಧಾರದ ಮೇಲೆ ಮಾತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಹೊರಗೆ ನಾವೆಲ್ಲ ಒಂದು, ನಾವೆಲ್ಲ ಹಿಂದು ಎಂದು ಹೇಳುತ್ತಲೇ ಒಳಗೆ ಮಾತ್ರ ಗರ್ಭಗುಡಿ ಸಂಸ್ಕೃತಿಯನ್ನು ಜೀವಂತ ಇಟ್ಟುಕೊಂಡಿದೆ ಬಿಜೆಪಿ. ಕೆಲವನ್ನು ಬಿಟ್ಟರೆ ದೀನ ದಲಿತರು, ಶೋಷಿತರಿಗೆ ಅಲ್ಲಿಗೆ ಪ್ರವೇಶಾ ಇದೆಯಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!