Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರಿಂದ ಮತಯಾಚನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 06 : ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೋವಿಂದ ಕಾರಜೋಳರವರು ನಗರದಲ್ಲಿ ವಿವಿಧ ಸಮುದಾಯದ ಪ್ರಬುದ್ದರ ಮತ್ತು ಕೀ ಓಟರ್ಸ್ ಸಭೆ ನಡೆಸಿ ಮತಯಾಚಿಸಿದರು.

ಒಂದೊಂದು ಬೂತ್‍ನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮುನ್ನೂರಕ್ಕೂ ಹೆಚ್ಚು ಮತಗಳು ಪಕ್ಷಕ್ಕೆ ಸಿಗುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಮೂರನೆ ಬಾರಿಗೆ ನರೇಂದ್ರಮೋದಿರವರು ಗೆದ್ದು ದೇಶದ ಪ್ರಧಾನಿಯಾದಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮೋದಿರವರ ಜನಪರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ವಿನಂತಿಸಿದರು.


ಬೂತ್ ಮಟ್ಟದ ಬೈಠಕ್‍ಗಳಿಗೆ ಹೆಚ್ಚಿನ ಮಹತ್ವವಿರುವುದರಿಂದ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಹಿರಿಯ ನಾಗರೀಕರ ಮನಸ್ಸನ್ನು ಗೆಲ್ಲುವುದು ತುಂಬಾ ಮುಖ್ಯ. ಕುಟುಂಬದ ಎಲ್ಲಾ ಮತದಾರರು ಮತದಾನ ಮಾಡುವಂತೆ ಜಾಗೃತಿ ವಹಿಸಿ ಬೂತ್ ಗೆದ್ದರೆ ಚುನಾವಣೆ ಗೆದ್ದಂತೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಏನು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೆನೋ ಅದನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ ಮಧ್ಯಕರ್ನಾಟಕದ ಬಯಲುಸೀಮೆಯನ್ನು ಅಭಿವೃದ್ದಿಗೊಳಿಸುವುದಾಗಿ ವಾಗ್ದಾನ ಮಾಡಿದರು.


ಇದೇ ತಿಂಗಳ 26 ರಂದು ನಡೆಯುವ ಚುನಾವಣೆಯಲ್ಲಿ ಯಾರು ಎಲ್ಲಿಯೇ ಇರಲಿ ಮತದಾನ ಮಾಡುವುದನ್ನು ಮಾತ್ರ ಮರೆಯಬಾರದು. ಅದರಂತೆ ನಿಮ್ಮ ಮನೆಯ ಅಕ್ಕಪಕ್ಕದಲ್ಲಿರುವವರು ಕಡ್ಡಾಯವಾಗಿ ಮತದಾನ ಮಾಡುವಂತೆ ಮನವೊಲಿಸಬೇಕೆಂದು ಮನವಿ ಮಾಡಿದರು.

ಪಟೇಲ್, ಗುಜ್ಜರ್, ಜೈನ್, ವಿಷ್ಣು, ವಿಶ್ವಕರ್ಮ, ಮರಾಠ, ಗಂಗಾ ಮತಸ್ಥ, ಆರ್ಯವೈಶ್ಯ ಸಮಾಜದ ಪ್ರಮುಖರನ್ನು ಭೇಟಿ ಮಾಡಿ ಮತಯಾಚಿಸಿದ ಗೋವಿಂದ ಕಾರಜೋಳರವರು ನಮ್ಮ ಪಕ್ಷ ಸಣ್ಣಸಣ್ಣ ಜಾತಿಗಳನ್ನು ಗುರುತಿಸಿ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರ ನೀಡುತ್ತಿದೆ. ಇದೆ ತಿಂಗಳ 26 ರಂದು ನಡೆಯುವ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವುದರ ಮೂಲಕ ದೇಶದಲ್ಲಿ ಮತ್ತೊಮ್ಮೆ ನರೇಂದ್ರಮೋದಿರವರನ್ನು ಪ್ರಧಾನಿಯನ್ನಾಗಿ ಮಾಡುವಂತೆ ವಿನಂತಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment