Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಗೆಲ್ತಾರಾ ಬಿಜೆಪಿ ಅಭ್ಯರ್ಥಿ : ಹೇಳಿದ್ದೇನು ಶ್ರೀನಿವಾಸ್ ಟಿ ದಾಸ ಕರಿಯಪ್ಪ..?

---Advertisement---

ದಾವಣಗೆರೆ : ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಬಿಜೆಪಿಯೇನೋ ಮೊದಲೇ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ಇನ್ನು ಅಭ್ಯರ್ಥಿಗಳನ್ನ ಘೋಷಣೆ ಮಾಡಿಲ್ಲ. ಆದರೂ ನಾವೇ ಅಭ್ಯರ್ಥಿ ಅಂತ ಕಾಂಗ್ರೆಸ್ ನಲ್ಲಿ ನಾಮಪತ್ರಗಳು ಸಲ್ಲಿಕೆ ಆಗಿವೆ. ಅದರಲ್ಲೂ ಜಿಲ್ಲೆಯಲ್ಲಿಯೇ ಶಕ್ತಿಶಾಲಿಯಾಗಿರುವ ಶಾಮನೂರು ಶಿವಶಂಕರಪ್ಪ ಕುಟುಂಬದ ಕುಡಿ ಸಮರ್ಥ್ ಎಂಟ್ರಿಯಾಗಿದ್ದು, ಅವರ ಎದುರು ನೀವೂ ಗೆಲ್ತೀರಾ ಎಂದು ಬಿಜೆಪಿ ನಾಯಕನನ್ನ ಕೇಳಿದ್ದಕ್ಕೆ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸ ಕರಿಯಪ್ಪ ಹೇಳಿದ್ದು ಹೀಗೆ.

ಬಿ ಫಾರಂ ಬಂದಿದೆ. ಈಗ ಸಾಂಕೇತಿಕವಾಗಿ ಐದು ಜನ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದೀವಿ. ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರೇ ತೀರ್ಮಾನ ಮಾಡಿದ್ದಾರೆ ಈ ಬಾರಿ ಬಿಜೆಪಿಯನ್ನ ಗೆಲ್ಲಿಸಬೇಕು ಅಂತ ಹೇಳಿ. ಇದರಲ್ಲಿ ಯಾವುದೇ ಉರುಳಿಲ್ಲ ಗೆದ್ದೇ ಗೆಲ್ಲುವ ನಂಬಿಕೆ ಇದೆ. ನಮ್ಮಲ್ಲಿ ಯಾವ ಗುದ್ದಾಟವೂ ಇಲ್ಲ, ಬಣವೂ ಇಲ್ಲ, ಎಲ್ಲರೂ ಒಂದೇ ಎಂಬಂತೆ ಇದ್ದೀವಿ. ಗೆದ್ದೇ ಗೆಲ್ಲುತ್ತೀನಿ. ಕಾಂಗ್ರೆಸ್ ವಿರುದ್ಧ ಗೆಲ್ಲುತ್ತೀನಿ. ಏನು ಮೂರು ವರ್ಷಗಳಿಂದ ಕಾಂಗ್ರೆಸ್ ದುರಾಡಳಿತ ನಡೆಸಿದೆ. ಅದರ ವಿರುದ್ಧ ಗೆಲ್ಲುತ್ತೀನಿ ಎಂಬ ಮಾತನ್ನ ಹೇಳಿದ್ದಾರೆ.

ಇವತ್ತು ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಕೊಟ್ಟಿದ್ದಾರೆ. ಶಾಮನೂರು ಫ್ಯಾಮಿಲಿ ಏನು ಹೇಳ್ತಿದೆ, ನಾವೇ ಗೆಲ್ಲೋರು, ನಮ್ಮನ್ನ ಬಿಟ್ಟರೆ ಯಾರೂ ಇಲ್ಕ,,, ನೀಮ್ಮಿಂದ ಗೆಲ್ಲೋಕೆ ಆಗಲ್ಲ ಅನ್ನೋ ಮನಸ್ಥಿತಿ ಬಂದಿದೆ. ಕೋಟಿಗಟ್ಟಲೆ ದುಡ್ಡಿದೆ, ದುಡ್ಡು ಚೆಲ್ಲಿ ಗೆದ್ದು ಬರ್ತೀವಿ ಅಂದುಕೊಂಡಿದ್ದಾರೆ. ಈ ಬಾರಿ ಆ ಆಟ ನಡೆಯಲ್ಲ. ಪಾಪ ಮುಸ್ಲಿಂರು ಅವತ್ತಿನಿಂದ ಗೆಲ್ಲಿಸಿಕೊಂಡು ಬಂದಿದ್ದಾರೆ. ಇಂದಲ್ಲ ನಾಳೆ ಒಳ್ಳೆಯದಾಗುತ್ತೆ ಅಂಥ ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now