Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ : ಅವರ ಅವಧಿಯಲ್ಲಿ ಕಲೆಕ್ಷನ್ ಮಾಡಿ ಅಭ್ಯಾಸವಾಗಿದೆ : ಸಚಿವ ಜಮೀರ್ ಅಹಮದ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.17 : ಇತ್ತಿಚೆಗಷ್ಟೇ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದೊಡ್ಡ ಮಟ್ಟದ ಐಟಿ ದಾಳಿ ನಡೆಸಿದ್ದರು. ಆ ವೇಳೆ ಕೋಟಿಗಟ್ಟಲೆ ಸಿಕ್ಕಿತ್ತು. ಆ ಹಣದ ಬಗ್ಗೆ ಬಿಜೆಪಿ ನಾಯಕರು ಸಾಕಷ್ಟು ಆರೋಪ ಮಾಡಿದ್ದರು. ಇದು ಕಾಂಗ್ರೆಸ್ ನವರ ಭ್ರಷ್ಟಾಚಾರ ಎಂದೇ ಆರೋಪ ಮಾಡಿದ್ದರು.

ಇಂದು ಕರ್ನಾಟಕ ರಾಜ್ಯ ವಕ್ಛ್ ಮಂಡಳಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಆನ್ವರ್ ಭಾಷಾ ರವರಿಗೆ ಅಭಿನಂದನಾ ಸಮಾರಂಭದ ಕಾರ್ಯಕ್ರಮಕ್ಕೆ ಆಗಮಿಸಿ
ಈ ಸಂಬಂಧ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಉದ್ಯಮಿಯೊಬ್ಬರ ಮನೆಯ
ಐಟಿ ದಾಳಿ ವೇಳೆ ಸಿಕ್ಕಿರುವ ಕೋಟಿ ಕೋಟಿ ಹಣ ವಿಚಾರದಲ್ಲಿ ಟೀಕಿಸುವ ಬಿಜೆಪಿಯವರಿಗೆ ಹೇಳೋಕೆ ಬೇರೆ ಏನಿದೆ. ಅವರ ಅವಧಿಯಲ್ಲಿ ಕಲೆಕ್ಷನ್ ಮಾಡೋದು ಅಭ್ಯಾಸ ಆಗಿದೆ. ಅವರ ಮೇಲೆ 40% ಆರೋಪ ಮಾಡಿದ್ವಿ, ಅದನ್ನು ಸಾಬೀತು ಮಾಡಬೇಕು ಅಲ್ವ, ಅದನ್ನು ಸಾಬೀತು ಮಾಡದೆ ಹಿಂಗೆ ಮಾತಾಡ್ತಾರೆ ಎಂದು ಬಿಜೆಪಿ ಆರೋಪಕ್ಕೆ ಕಿಡಿ ಕಾರಿದರು.

ಗ್ಯಾರಂಟಿ ಯೋಜನೆಗಳನ್ನು ನೋಡಿ ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಬಿಜೆಪಿಯವರು ಹೇಳುವುದು ಅಲ್ಲ, ಅದನ್ನು ಸಾಬೀತು ಮಾಡಬೇಕು ಎಂದು ಹೇಳಿದರು. ಸಿಎಂ ಕಲೆಕ್ಷನ್ ಮಾಸ್ಟರ್ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವರು ಬಿಜೆಪಿಯವರಿಗೆ ಹೇಳೋಕೆ ಇನ್ನೇನಿದೆ ? ಎಂದು ಪ್ರಶ್ನೆ ಹಾಕಿದರು. ಅವರ ಆಡಳಿತಾವಧಿಯಲ್ಲಿ ಕಲೆಕ್ಷನ್ ಮಾಡಿ ಅವರಿಗೆ ರೂಢಿ ಆಗಿದೆ. ಎಲ್ಲರೂ ಕೂಡ ಅವರಂತೆ ಅಂತಾ ತಿಳಿದಿದ್ದಾರೆ. ನಮ್ಮ ಉತ್ತಮ ಕೆಲಸ ನೋಡಿ ಬಿಜೆಪಿಯವರಿಗೆ ಸಹಿಸಕ್ಕೆ ಆಗ್ತಿಲ್ಲ ಎಂದು ಕಿಡಿಕಾರಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment