Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಟಿಕೆಟ್ ಕನ್ಫರ್ಮ್ ಮಾಡದ ಬಿಜೆಪಿ ವಿರುದ್ಧ ಮುನಿಸಿಕೊಂಡರಾ ಶ್ರೀರಾಮುಲು..?

Facebook
Twitter
Telegram
WhatsApp

ಬೆಂಗಳೂರು: ಚುನಾವಣೆ ಹತ್ತಿರವಿರುವಾಗಲೇ ಸಚಿವ ಶ್ರೀರಾಮುಲು ಬಿಜೆಪಿ ಮೇಲೆ ಮುನಿಸಿಕೊಂಡರಾ ಎಂಬ ಅನುಮಾನ ಶುರುವಾಗಿದೆ. ಈ ಅನುಮಾನ, ಚರ್ಚೆಗೆಲ್ಲಾ ಕಾರಣ, ಸಾರಿಗೆ ಇಲಾಖೆಯ ಸಚಿವರಾಗಿರುವ ಶ್ರೀರಾಮುಲು ತಮ್ಮ ಕ್ಷೇತ್ರದ ಅದರಲ್ಲೂ ಮುಖ್ಯವಾದ ಕಾರ್ಯಕ್ರಮಕ್ಕೆ ಗೈರಾಗಿರುವುದು ಇಷ್ಟೆಲ್ಲಾ ಚರ್ಚೆ, ಅನುಮಾನಕ್ಕೆ ಕಾರಣವಾಗಿದೆ.

ಸಚಿವ ಶ್ರೀರಾಮುಲು ಅವರು ಈ ಮೊದಲು ಆರೋಗ್ಯ ಇಲಾಖೆಯ ಸಚಿವರಾಗಿದ್ದರು. ಕೊರೊನಾ ಸಮಯದಲ್ಲಿ ಸಾರಿಗೆ ಇಲಾಖೆಗೆ ಸಚಿವರನ್ನಾಗಿ ನೇಮಿಸಿದರು. ಆದರೆ ಆ ಇಲಾಖೆ ಶ್ರೀರಾಮುಲುಗೆ ಇಷ್ಟವೇನು ಇರಲಿಲ್ಲ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಮತ್ತೊಮ್ಮೆ ಶ್ರೀರಾಮುಲು ಅವರನ್ನೇ ಕಣಕ್ಕಿಳಿಸಲು ಬಿಜೆಪಿ ನಿರ್ಧಾರ ಮಾಡಿದೆ ಎ‌ನ್ನಲಾಗುತ್ತಿದೆ. ಆದರೆ ಮೊಣಕಾಲ್ಮೂರು ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ಬಳ್ಳಾರಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಬಿಜೆಪಿ ಮಾತ್ರ ಇನ್ನು ಟಿಕೆಟ್ ಕನ್ಫರ್ಮ್ ಮಾಡಿಲ್ಲ.

ಈ ಎಲ್ಲಾ ಬೆಳವಣಿಗೆಗಳಿಂದ ಶ್ರೀರಾಮುಲು ಮುನಿಸಿಕೊಂಡರಾ ಎಂಬ ಪ್ರಶ್ನೆಗಳು ಎದ್ದಿವೆ. ಕೆಎಸ್ಆರ್ಡಿಸಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದುಬಾರಿ ಬಸ್ ಖರೀದಿ ಮಾಡಿದೆ. ಈ ಬಸ್ ಉದ್ಘಾಟನೆಗೂ ಶ್ರೀರಾಮುಲು ಬಂದಿರಲಿಲ್ಲ. ಈ ಮೂಲಕ ಬಿಜೆಪಿ ಮೇಲೆ ರಾಮುಲು ಮುನಿಸಿಕೊಂಡರಾ ಎಂಬ ಚರ್ಚೆಗಳು ಹರಿದಾಡುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!