Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ, ಕಾಂಗ್ರೆಸ್ ಪರ್ಸೆಂಟೇಜ್‌ ಸರ್ಕಾರಗಳು: ಹೆಚ್ ಡಿ ಕುಮಾರಸ್ವಾಮಿ

Facebook
Twitter
Telegram
WhatsApp

ಕಲಬುರಗಿ: ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರೀಯ ಪಕ್ಷಗಳ ಸರಕಾರಗಳು ಪರ್ಸೆಂಟೇಜ್‌ ಸರಕಾರಗಳಾಗಿದ್ದು, ಸ್ವತಃ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳೇ ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಮೂಲಕ ಆ ಪಕ್ಷಗಳ ಭ್ರಷ್ಟಮುಖ ಜನರ ಮುಂದೆ ಅನಾವರಣಗೊಂಡಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು 10% ಸರಕಾರ ಎಂದು ಕರೆಯುತ್ತಿದ್ದರು. ಈಗ ಅವರದ್ದೇ ಪಕ್ಷದ ಸರಕಾರವನ್ನು ಕಾಂಗ್ರೆಸ್‌ ಪಕ್ಷದವರು 20% ಸರಕಾರ ಎಂದು ಕರೆಯುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.

ಜನರ ಹಣ ಲೂಟಿ ಹೊಡೆಯುವುದರಲ್ಲಿ ಹಾಗೂ ಪರ್ಸೆಂಟೇಜ್‌ ತೆಗೆದುಕೊಳ್ಳುವುದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ದೊಡ್ಡ ಪೈಪೋಟಿಯೇ ಇದೆ ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಇದ್ದಾಗ ಬೆಂಗಳೂರಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಪೊಲೀಸ್‌ ವಸತಿ ಸಮುಚ್ಛಯ ಈಗ ಬೀಳುವ ಹಂತದಲ್ಲಿದೆ. ಕಳಪೆ ಕಾಮಗಾರಿ, ಪರ್ಸಂಟೇಜ್‌ ವ್ಯವಹಾರ ಇತ್ಯಾದಿ ಅಕ್ರಮಗಳಿಂದ ರಾಜ್ಯವನ್ನು ರಕ್ಷಣೆ ಮಾಡುವ ಪೊಲೀಸ್‌ ಕುಟುಂಬಗಳು ಅಪಾಯಕ್ಕೆ ಸಿಲುಕಿವೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ನಾಡನ್ನು ಕಾಪಾಡುವ ಪೊಲೀಸ್‌ ಸಿಬ್ಬಂದಿ ವಾಸ ಮಾಡುವ ಕ್ವಾಟ್ರಸ್‌ ನಿರ್ಮಾಣದಲ್ಲಿ ಕಳಪೆ, ಅವ್ಯವಹಾರ ನಡೆದಿದೆ ಎಂದರೆ ಉಳಿದ ಯೋಜನೆಗಳ ಕಥೆ ಏನು? ಎಷ್ಟು ಅಕ್ರಮ ನಡೆದಿದೆ? ಎಷ್ಟು ಪರ್ಸೆಂಟೇಜ್‌ ವ್ಯವಹಾರವಾಗಿದೆ ಎಂಬುದು ಜನರಿಗೆ ಗೊತ್ತಾಗಲಿ.
ಕರ್ನಾಟಕಕ್ಕೆ ರಾಷ್ಟ್ರೀಯ ಪಕ್ಷಗಳು ಏನು ಮಾಡಿವೆ ಎಂಬುದು ಜನರಿಗೆ ಚೆನ್ನಾಗಿ ಅರ್ಥವಾಗಿದೆ. ಇನ್ನು ಮುಂದೆಯಾದರೂ ಜನರು ಎಚ್ಚೆತ್ತುಕೊಂಡು ನಾಡಿನ ಬಗ್ಗೆ ಕಾಳಜಿ ಇರುವ ಜೆಡಿಎಸ್‌ ಪಕ್ಷವನ್ನು ಬೆಂಬಲಿಸಲಿ ಎಂದು ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!