ಬಿಜೆಪಿ ನಮ್ಮ ಸಮುದಾಯದ ವಿಷಯದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ : ಹಾಗಾಗಿ ಕಾಂಗ್ರೆಸ್ ಸೇರಲು ನಿರ್ಧಾರ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

 

ಸುದ್ದಿಒನ್, ಚಿತ್ರದುರ್ಗ : ವಿಧಾನಸಭೆ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದೆ. ಕಾಂಗ್ರೆಸ್ ಪಕ್ಷ ಸೇರಲು ಯಾವುದೇ ಬೇಡಿಕೆಯಿಟ್ಟಿಲ್ಲ ಎಂದು ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್  ಹೇಳಿದರು. ‌

ಬೆಂಗಳೂರಿನಲ್ಲಿ ಭಾನುವಾರ ಸಿಎಂ ಮತ್ತು ಡಿಸಿಎಂ ಭೇಟಿ ಬಳಿಕ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಹಿರಿಯೂರಿನಲ್ಲಿ ಮಂಗಳವಾರ ಸಮಾಜದ ಮುಖಂಡರ ಸಭೆ ಕರೆದಿದ್ದರು. ನಂತರ ಸಂಜೆ ವೇಳೆಗೆ ಚಿತ್ರದುರ್ಗದ ಯಾದವ ಗುರು ಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೇ ಆಕ್ಟೋಬರ್ 20 ರಂದು ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದ್ದೇನೆ. ಈ ವಿಚಾರವಾಗಿ ಸಮಾಜದ ಮುಖಂಡರ ಸಭೆ ಕರೆದು ಚರ್ಚೆ ನಡೆಸಲಾಯಿತು. ನಮ್ಮ ಸಮಾಜದ ಮತ್ತು ನಮ್ಮ ಕುಟುಂಬದ ಹಿತ ಬಯಸುವವರು ಕಾಂಗ್ರೆಸ್ ಗೆ ಆಹ್ವಾನಿಸಿದ್ದರು. ಡಿಕೆ ಶಿವಕುಮಾರ್ ಕೂಡಾ ಆಹ್ವಾನ ಮಾಡಿದ್ದರು. ಕಾಂಗ್ರೆಸ್ ಸೇರ್ಪಡೆ ಖಚಿತ ಎಂದರು. ಆದರೆ ನಾನು ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ‌ ಎಂದು ಹೇಳಿದರು.

ಬಿಜೆಪಿಯಲ್ಲಿ ನಮಗೆ ಯಾವುದೇ ಅನ್ಯಾಯವಾಗಿಲ್ಲ. ಇಬ್ಬರು ಸಿಎಂ ಗಳು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಸಹಾಕರ ನೀಡಿದ್ದರು. ಹಿರಿಯೂರು ಕ್ಷೇತ್ರಕ್ಕೆ ಬಿಜೆಪಿ ಸರ್ಕಾರ ಕೋಟ್ಯಾಂತರ ಅನುದಾನ ನೀಡಿದೆ. ಕೆಲಸ ಕೂಡಾ ಮಾಡಿರುವೆ. ನನಗೆ ಕಡೆ ಗಳಿಗೆಯಲ್ಲಿ ಮಂತ್ರಿಸ್ಥಾನ ತಪ್ಪಿಸಲಾಯಿತು.ಕಾಡುಗೊಲ್ಲ ಅಭಿವೃದ್ಧಿ ನಿಗಮ ವೇಳೆ ಗೊಂದಲ ಸೃಷ್ಠಿಸಿದರು. ನಮ್ಮನ್ನು ಗಣನೆಗೆ ತೆಗೆದುಕೊಂಡು ನಿಗಮ ಮಾಡಬೇಕಿತ್ತು. ಆದರೆ ಸಮುದಾಯದ ವಿಷಯದಲ್ಲಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಸಮುದಾಯ 25 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಇದೆ. ರಾಜಕೀಯ ಪ್ರಾತಿನಿಧ್ಯ ಮತ್ತು ಬೇರೆ ಸ್ಥಾನಮಾನ ವಿಷಯದಲ್ಲಿ ಗೊಂದಲ ಆಯ್ತು.
ಸಮಾಜದ ಮುಖಂಡರ ನಿರ್ಧಾರದಂತೆ ಪಕ್ಷ ಬದಲಾವಣೆ ಮಾಡುತ್ತಿದ್ದೇವೆ ಎಂದರು.

ಪತಿಗೆ MLC ಟಿಕೆಟ್ ನೀಡುತ್ತಾರೆ ಎಂದು ನಾನು ಕಾಂಗ್ರೆಸ್ಸಿಗೆ ಹೋಗಲ್ಲ. ಟಿಕೆಟ್ ನೀಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಗೆ ಕೆಪಿಸಿಸಿ ಅದ್ಯಕ್ಷರು ಈಗಾಗಲೇ ಪಕ್ಷದ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ನಾನು ಈ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರದಿಂದ ಸೋತಿರುವುದರಿಂದ ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕೆ.ಆರ್.ಪುರಂ ಕ್ಷೇತ್ರ ಎಂದು ತೀರ್ಮಾನ ಮಾಡಿಲ್ಲ. ಮತ್ತು ಕಾಂಗ್ರೆಸ್ ಪಕ್ಷ ಸೇರಲು ಯಾವುದೇ ಬೇಡಿಕೆಯಿಟ್ಟಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪತಿ ಡಿ.ಟಿ. ಶ್ರೀನಿವಾಸ್, ಸಿ.ಟಿ.ಕೃಷ್ಣಮೂರ್ತಿ ಸೇರಿದಂತೆ ಸಮಾಜದ ಹಲವು ಮುಖಂಡರು ಹಾಜರಿದ್ದರು.

 

suddionenews

Recent Posts

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

3 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

16 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

6 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

6 hours ago