Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿ ಹಾಲಿ ಮತ್ತು ಮಾಜಿ ಸಿಎಂ ನಡುವೆ ಎಲ್ಲವೂ ಸರಿ ಇಲ್ವಾ..? ಕಾರ್ಯಕಾರಿಣಿ ಸಭೆಯಲ್ಲಿ ಕಂಡಿದ್ದೇನು..?

Facebook
Twitter
Telegram
WhatsApp

ಹುಬ್ಬಳ್ಳಿ: ಎಲ್ಲಾ ಪಕ್ಷದಲ್ಲೂ ಆಂತರಿಕ ಮುನಿಸು ಅನ್ನೋದು ಇದ್ದೇ ಇರುತ್ತೆ. ಅದು ಆಗಾಗ ಬಹಿರಂಗ ವಾಗುತ್ತಿರುತ್ತೆ. ಇದೀಗ ಬಿಜೆಪಿಯಲ್ಲಿ ಅಂತ ಮುನಿಸೊಂದು ಎಲ್ಲರ ಮುಂದೆ ಅನಾವರಣವಾಗಿದೆ. ಅದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ನಡುವೆ.

ಹುಬ್ಬಳ್ಳಿಯಲ್ಲಿ ನಡೆದ ಎರಡು ದಿನಗಳ ಕಾರ್ಯಕಾರಿಣಿ ಸಭೆ ಅಂತ್ಯವಾಗಿದೆ. ಈ ಸಭೆಯಲ್ಲಿ ಪಜ್ಷ ಸಂಘಟನೆ, ಮುಂದಿನ ಚುನಾವಣೆಯ ರೂಪು ರೇಷೆಗಳನ್ನು ಚರ್ಚಿಸಲಾಗಿದೆ. ಇದೇ ವೇಳೆ ಶಾಸಕ ಅರವಿಂದ್ ಬೆಲ್ಲದ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.‌ ಇದು ಕೊಂಚ ಎಲ್ಲರಿಗೂ ಶಾಕಿಂಗ್ ವಿಚಾರ ಅನಿಸಿದೆ. ಇನ್ನು ಕೋರ್ ಕಮಿಟಿ ಸಭೆ ನಡೆಯದೆಯೇ ಕಾರ್ಯಕಾರಿಣಿ ಸಭೆಯೂ ಅಂತ್ಯವಾಗಿದೆ. ಇನ್ನು ರಾಜೀನಾಮೆ ನೀಡಿದ ಬೆಲ್ಲದ್ ಎರಡನೇ ದಿನ ಗೈರಾಗಿ ತಮ್ಮ ಅತೃಪ್ತಿ ಹೊರ ಹಾಕಿದ್ದರು.

ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಒಂದೇ ವೇದಿಕೆಯಲ್ಲಿದ್ರು ಕೂಡ ಒಬ್ಬರಿಗೊಬ್ಬರು ಮುಖ ಕೂಡ ನೋಡಿಕೊಂಡಿರಲಿಲ್ಲ. ಕಾರ್ಯಕಾರಿಣಿ ಸಭೆಗೆ ಸಿಎಂ ಬೊಮ್ಮಾಯಿ ಆಗಮಿಸುತ್ತಿದ್ದಂತೆಯೇ ಎಲ್ಲರ ಚಿತ್ತ ಅವರತ್ತ ಹರಿಯಿತು. ಆದ್ರೆ ಎದುರಿಗೇ ಇದ್ರೂ ಜಗದೀಶ್ ಶೆಟ್ಟರ್ ತಿರುಗಿ ನೋಡಲಿಲ್ಲ. ಎಲ್ಲಾ ಸಚಿವರು ಸಿಎಂಗೆ ನಮಸ್ಕಾರ ಮಾಡಿದ ಸಂದರ್ಭದಲ್ಲಿ ಮಾಜಿ ಸಿಎಂ ಶೆಟ್ಟರ್ ಮೌನ ವಹಿಸಿದ್ದುದು, ಹಲವಾರು ಅರ್ಥಗಳಿಗೆ ಎಡೆಮಾಡಿಕೊಟ್ಟಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!