Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗ್ಡೆಗೆ ಹೈಕೋರ್ಟ್ ಚಾಟಿ..!

---Advertisement---

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ಸಂಧರ್ಭದಲ್ಲಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದರು. ಈ ವಿಚಾರವಾಗಿ ಎಫ್ಐಆರ್ ಕೂಡ ದಾಖಲಾಗಿತ್ತು. ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ನಡೆಸಿದೆ.

ವಿಚಾರಣೆಯ ವೇಳೆ ಸಂಸದ ಅನಂತ್ ಕುನಾರ್ ಹೆಗ್ಡೆ ಅವರಿಗೆ ಚಾಟಿ ಬೀಸಿದೆ. ಬುದ್ದಿ ಮಾತನ್ನು ತಿಳಿಸಿದೆ. ಮುಖ್ಯಮಂತ್ರಿ ವಿರುದ್ಧ ಈ ರೀರಿಯ ಪದಗಳನ್ನು ಬಳಸಬಹುದೇ ಎಂದು ಪ್ರಶ್ನೆ ಮಾಡಿದೆ. ಅಭಿಪ್ರಾಯ ಬೇಧವಿರಬಹುದು, ಅವರಿಗೆ ನೀವೂ ಮತವನ್ನು ನೀಡದೆ ಇರಬಹುದು, ಆದರೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳನ್ನು ಗೌರವಿಸದೆ ಇದ್ದರೆ ಹೇಗೆ..? ಚುನಾವಣೆಯಲ್ಲಿ ಒಂದು ಪಕ್ಷ ಬರುತ್ತದೆ ಹೋಗುತ್ತದೆ. ಪ್ರಜಾಪ್ರಭುತ್ವದಲ್ಲಿ ಕೆಲಸ ನಡೆಯುವುದೇ ಹೀಗೆ. ಚುನಾವಣೆಯಲ್ಲಿ ಸೋಲಿಸಿದರು ಭಾಷೆಯ ಬಳಕೆ ಮೇಲೆ ಹಿಡಿತವಿರಲಿ, ಗಮನವಿರಲಿ ಎಂದಿದೆ.

ಅಯೋಧ್ಯೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದ್ದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ ಜ. 22 ಕ್ಕೆ ಹೋಗಲ್ಲ, ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದ್ದರು. ಈ ಮಾತಿಗೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದರು. ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment