Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

---Advertisement---

ದಾವಣಗೆರೆ. ಏ. 07: ನಾವು ಮಾಡಿದ ಜನಪರ ಕೆಲಸಗಳ, ಅಭಿವೃದ್ದಿ ಕೆಲಸಗಳ ಆಧಾರದಲ್ಲಿ ಮತ ಕೇಳುತ್ತಿದ್ದೇವೆ. ಆದರೆ, ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ, ಎರಡೂ ಕ್ಷೇತ್ರದಲ್ಲೂ ಗೆದ್ದು ತೋರಿಸ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಭಾರೀ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಆರು ಬಾರಿ ಶಾದಕರಾಗಿದ್ದ ಶಾಮನೂರು‌ ಶಿವಶಂಕರಪ್ಪ ಅವರು ಇದೇ ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳು ಸರಾಗವಾಗಿ ಮುಂದುವರೆಯಲು ಸಮರ್ಥ್ ಶಾಮನೂರು ಅವರನ್ನು ಸಮರ್ಥವಾಗಿ ಗೆಲ್ಲಿಸಿ ಮುನ್ನಡೆಸಿ ಎಂದು ಮನವಿ ಮಾಡಿದರು.

ಒಂಬತ್ತು ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಅಭಿವೃದ್ಧಿ ಮಾಡಲಿಲ್ಲ. ಹೀಗಾಗಿ ತಾವು ಮಾಡಿದ ಕೆಲಸಗಳ ಆಧಾರದಲ್ಲಿ ಮತ ಕೇಳಲು ಸಾಧ್ಯವಾಗದೆ ನನಗೆ ಬಯ್ಯುತ್ತಾ ಮತ ಕೇಳುತ್ತಿದ್ದಾರೆ. ನಾನು ದುರ್ಬಲರ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ ಎನ್ನುವ ಕಾರಣದಿಂದಲೇ ನನ್ನನ್ನು ಬೈಯ್ದು ಓಟು ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಎಲ್ಲಾ ಜಾತಿ, ಧರ್ಮದವರನ್ನೂ ಜೊತೆಗೆ ಕೊಂಡೊಯ್ಯುವ ಪಕ್ಷ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಭಜನೆ ತಂದು ಓಟು ಕೇಳುವ ಕೆಟ್ಟ ರಾಜಕಾರಣವನ್ನು ನಾವು ಮಾಡುವುದಿಲ್ಲ. ಕೋಮುಗಲಭೆಗಳನ್ನು ಸಂಘಟಿಸಿ ರಾಜಕಾರಣ ಮಾಡುವುದು ಬಿಜೆಪಿಯ ಜಾಯಮಾನ ಎಂದರು.

ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರು 25ಸಾವಿರ ಕೋಟಿ ಹಣ ಲೂಟಿ ಮಾಡಿರುವ ಭ್ರಷ್ಟರು ಎಂದು ಬಿಜೆಪಿಯವರೇ ಆಗಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅವರೇ ನೇರವಾಗಿ ಆರೋಪಿಸಿದ್ದಾರೆ. ಈ ಯಡಿಯೂರಪ್ಪ ಮತ್ತು ವಿಜಯೇಂದ್ರ ನಾಚಿಕೆ ಬಿಟ್ಟು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ.ಮೇಟಿ ಇಬ್ಬರೂ ಪ್ರಾಮಾಣಿಕ ನಾಯಕರು. ಇವರಿಬ್ಬರ ನಿಧನದಿಂದ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಗೆಲ್ಲುವುದು ಶತಸಿದ್ದ ಎಂದು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ನುಡಿದಂತೆ ನಡೆದು‌, ಕೊಟ್ಟ ಭರವಸೆಗಳನ್ನು ಈಡೇರಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಕೆಲಸ ಮಾಡಿ ಬಂದು ನಿಮ್ಮಿಂದ ಅಭಿವೃದ್ಧಿ ಪರವಾಗಿ ಮತ ಕೇಳುತ್ತಿದ್ದೇವೆ. ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಈ ಕಾರಣದಿಂದ ನಮ್ಮ ಕೆಲಸಕ್ಕೆ ಕೈ ಹಿಡಿದು ಸಹಕರಿಸಿ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...