ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳ ಮೇಲಾಗಿದೆ. ಆದ್ರೆ ಬಿಜೆಪಿ ಮಾತ್ರ ಇನ್ನು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇಷ್ಟು ದಿನವಾದರೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಏಕೈಕ ಪಕ್ಷ ಬಿಜೆಪಿಯಾಗಿದೆ. ಅಷ್ಟೇ ಅಲ್ಲ ಇಷ್ಟು ದಿನದವರೆಗೂ ನಾಯಕನಿಲ್ಲದೆ ಇರುವುದು ಐತಿಹಾಸಿಕ ದಾಖಲೆಯಾಗಿದೆ. ಹೀಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡದೆ ಇರುವುದರಿಂದ ಸಿಗುವ ವಿಶೇಷ ಸವಲತ್ತುಗಳನ್ನು ಕಳೆದುಕೊಳ್ಳುವಂತೆ ಆಗಿದೆ. ಎರಡು ಸದನದಲ್ಲಿ ನಾಯಕನನ್ನು ನೇಮಿಸದೆ ಹೋದಲ್ಲಿ ಸವಲತ್ತುಗಳನ್ನು ಕಳೆದುಕೊಳ್ಳಲಿದೆಯಂತೆ.
ಬಿಜೆಪಿಯಲ್ಲಿ ಸದ್ಯಕ್ಕೆ ಯಡಿಯೂರಪ್ಪ ಹಾಗೂ ಬಿಎಲ್ ಸಂತೋಷ್ ಬಣವಿದೆ. ಈ ಬಣಗಳ ವಿಚಾರಕ್ಕೇನೆ ಇನ್ನು ವಿಪಕ್ಷನ ನಾಯಕನ ಆಯ್ಕೆ ಕಗ್ಗಂಟಾಗಿದೆ ಎಂದೇ ಹೇಳಲಾಗುತ್ತಿದೆ. ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ನಿರ್ಧಾರ ಕೇಂದ್ರ ಸರ್ಕಾರದ ಮೇಲೆ ಬಿಟ್ಟಿದೆ. ಕೇಂದ್ರ ಸರ್ಕಾರ ಇನ್ನು ಆಯ್ಕೆ ಮಾಡದೆ ಇರುವುದೇ ಆಶ್ಚರ್ಯಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಗುಂಪಿನಲ್ಲಿ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಿ, ಸಿಟಿ ರವಿ ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಇದಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿಲ್ಲ. ಪ್ರಮುಖ ವಿರೋಧ ಪಕ್ಷವು ಎರಡೂ ಸದನಗಳಲ್ಲಿ ವಿರೋಧ ಪಕ್ಷದ ನಾಯಕನನ್ನು ನೇಮಿಸದಿರುವುದು ಅತ್ಯಂತ ದುರದೃಷ್ಟಕರ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಮತ್ತು ಮುಖ್ಯ ಸಚೇತಕ ಎಂಎಲ್ಸಿ ಸಲೀಂ ಅಹ್ಮದ್ ಅಭಿಪ್ರಾಯ ಪಟ್ಟಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್