Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ಓಡಿ ಹೋಗಲು ಬಿಜೆಪಿ ಸಹಾಯ ಮಾಡಿದೆ : ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಆರೋಪ

---Advertisement---

ಬೆಂಗಳೂರು: ದೇಶ ಬಿಟ್ಟು ಸಂಸದ ಪ್ರಜ್ವಲ್ ಓಡಿ ಹೋಗಿದ್ದಾರೆ. ಓಡಿ ಹೋಗಲು ಕೇಂದ್ರ ಸರ್ಕಾರ ಸಹಾಯ ಮಾಡಿದೆ. ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡಬೇಕಿತ್ತು. ಪ್ರಜ್ವಲ್ ಮೇಲೆ ಒಂದು ತಿಂಗಳ ಹಿಂದೆ ಆರೋಪ ಇತ್ತು. ಎಲ್ಲವೂ ಗೊತ್ತಿದ್ದು ಓಡಿ ಹೋಗಲು ಬಿಜೆಪಿ ಸಹಾಯ‌ ಮಾಡಿದೆ ಎಂದು ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಆರೋಪಿಸಿದ್ದಾರೆ.

 

ಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತರಬೇಕು ಎಂದು ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಒತ್ತಾಯಿದ್ದಾರೆ. ಅಪರಾಧಿ ಜರ್ಮನಿಗೆ ಹೋಗಿದ್ದಾನೆ. ಕೇಂದ್ರ ಕೂಡಲೇ ಮಧ್ಯಪ್ರವೇಶಿಸಬೇಕು. ವಿದೇಶಾಂಗ ಸಚಿವರ ಮೂಲಕ ಗಮನಕ್ಕೆ ತರಬೇಕು. ಜರ್ಮನಿ ಸರ್ಕಾರದ ಜೊತೆ ಮಾತನಾಡಬೇಕು. ಆರೋಪಿಯನ್ನ ಕಾನೂನು‌ ಕ್ರಮಕ್ಕೆ ಒಳಪಡಿಸಬೇಕು ಎಂದಿದ್ದಾರೆ.

 

ನಾನು ಸಾವಿರಾರು ಮಹಿಳೆಯರ ಜೊತೆ ಮಾತನಾಡಿದೆ. ದೇಶ್ಯಾದ್ಯಂತ ನಾನು ಮಹಿಳೆಯರ ಜೊತೆ ‌ಮಾತನಾಡಿದ್ದೇನೆ. ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಲ್ಲ ದಾಖಲೆ ಮುರುದಿದ್ದಾರೆ. ಮೋದಿ ಕುಟುಂಬ ರಾಜಕೀಯ ಮತ್ತು ಹೆಣ್ಣುಮಕ್ಕಳ ಬಗ್ಗೆ ಮಾತನಾಡುತ್ತಾರೆ. ಆದ್ರೆ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಮಾಡಿದವರು ಮೋದಿ ಕುಟುಂಬದಲ್ಲಿ ಇದ್ದಾರೆ. ಸಂಸದ ಬ್ರಿಜ್ ಭೂಷನ್, ಸಂದೀಪ್ ಸಿಂಗ್ ಸೇರಿದಂತೆ ದೌರ್ಜನ್ಯ ಮಾಡಿದವರಿದ್ದಾರೆ.

 

ಬೇಟಿ ಬಚಾವ್, ಬೇಟಿ ಪಡಾವ್ ಅಂತ ಘೋಷಣೆ ಕೂಗುತ್ತಾರೆ. ಸಂಸದ ಪ್ರಜ್ವಲ್ ರೇವಣ್ಣ ದೌರ್ಜನ್ಯದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದೆ. ಪ್ರಧಾನಿಯನ್ನ ಜೆಡಿಎಸ್ ಪರಿವಾರ ಭೇಟಿ ಮಾಡುತ್ತೆ. ಮಾಜಿ ಸಿಎಂ,ಮಾಜಿ ಸಚಿವರ ಪರಿವಾರ ಭೇಟಿ ಮಾಡುತ್ತೆ. ಪ್ರಜ್ವಲ್ ರೇವಣ್ಣ ಕೂಡ ಇರ್ತಾರೆ. ಇದು ಮೋದಿ ಪರಿವಾರ. ಸಾವಿರಾರು ಮಹಿಳೆಯರ ಮೇಲೆ ಕೃತ್ಯ ನಡೆದಿದೆ. ಆದರೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment