Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಮೊದಲಿನಿಂದಲೂ ಎಸ್ಸಿ. ಎಸ್ಟಿ. ಹಿಂದುಳಿದವರ ವಿರೋಧಿ : ಬಿ.ಯೋಗೇಶ್‍ಬಾಬು

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 30  : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆಗೆ ಸಚಿವ ನಾಗೇಂದ್ರ ತಲೆದಂಡಕ್ಕೆ ಬಿಜೆಪಿಯವರು ಪಟ್ಟು ಹಿಡಿದಿರುವುದನ್ನು ದ್ರಾಕ್ಷಿ ಮತ್ತು ವೈನ್ಸ್ ಮಂಡಳಿ ಚೇರ್ಮನ್ ಬಿ.ಯೋಗೇಶ್‍ಬಾಬು ಖಂಡಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೇಲಾಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರನ್ ಎಲ್ಲಿಯೂ ಸಚಿವ ನಾಗೇಂದ್ರರವರ ಹೆಸರನ್ನು ನಮೂದಿಸಿಲ್ಲ ಎಂದು ಅಧಿಕಾರಿ ಪತ್ನಿಯೇ ಹೇಳಿಕೆ ನೀಡಿದ್ದಾರೆ. ಆದಾಗ್ಯೂ ಬಿಜೆಪಿ.ಯವರು ರಾಜ್ಯದ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿರುವುದರಲ್ಲಿ ಅರ್ಥವಿಲ್ಲ. ಪ್ರಾಣ ಕಳೆದುಕೊಂಡಿರುವ ಚಂದ್ರಶೇಖರನ್ ಕುಟುಂಬದ ಜೊತೆ ಸರ್ಕಾರವಿದೆ. ಮೂವರು ಅಧಿಕಾರಿಗಳ ವಿರುದ್ದ ಎಫ್.ಐ.ಆರ್. ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬರುವತನಕ ಕಾಯಬೇಕು ಎಂದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಕ್ಕೆ ರಾಜ್ಯ ಸರ್ಕಾರ ಈಗಾಗಲೆ ಬೇರೆ ಅಧಿಕಾರಿಯನ್ನು ನೇಮಿಸಿದೆ. ಬಿಜೆಪಿಯ ವಿಜಯೇಂದ್ರ, ಅಶ್ವಥನಾರಾಯಣ ಇವರುಗಳು ಸಚಿವ ನಾಗೇಂದ್ರ ತಲೆದಂಡಕ್ಕೆ ಪಟ್ಟು ಹಿಡಿದಿರುವುದನ್ನು ನೋಡಿಕೊಂಡು ಸುಮ್ಮನಿರಲು ಆಗುವುದಿಲ್ಲ. ರಾಜ್ಯದಲ್ಲಿ ಐವತ್ತು ಲಕ್ಷದಷ್ಟು ಪರಿಶಿಷ್ಠ ವರ್ಗದವರಿದ್ದೇವೆ. ಸಚಿವರ ರಾಜಿನಾಮೆಯ ಅವಶ್ಯಕತೆಯಿಲ್ಲ. ಬಿಜೆಪಿ ಮೊದಲಿನಿಂದಲೂ ಎಸ್ಸಿ. ಎಸ್ಟಿ. ಹಿಂದುಳಿದವರ ವಿರೋಧಿ ಎನ್ನುವುದು ಗೊತ್ತಿದೆ ಎಂದು ವಿರೋಧಿಗಳಿಗೆ ಬಿ.ಯೋಗೇಶ್‍ಬಾಬು ತಿರುಗೇಟು ನೀಡಿದರು.

ನಿಗಮದ ಖಾತೆಯಿಂದ ವಿವಿಧ ಬ್ಯಾಂಕ್‍ಗಳ ಖಾತೆಗೆ ಹಣ ವರ್ಗಾವಣೆಯಾಗಿರುವುದಕ್ಕೂ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರನ್‍ರವರಿಗೂ ಸಂಬಂಧವಿಲ್ಲ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದಲ್ಲಿ ಕ್ರಿಯಾಶೀಲ ಅಧಿಕಾರಿಯಾಗಿದ್ದರು. ಆದರೆ ಮೇಲಾಧಿಕಾರಿಗಳ ಕಿರುಕುಳ ಹಾಗೂ ಒತ್ತಡಕ್ಕೆ ಆತ್ಮಹತ್ಯೆಯಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದರು.

ಕೆ.ಪಿ.ಸಿ.ಸಿ. ಮಾಧ್ಯಮ ವಕ್ತಾರ ಜಿ.ಬಿ.ಬಾಲಕೃಷ್ಣಸ್ವಾಮಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಪಂಗಡ ವಿಭಾಗದ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್, ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಎಸ್ಸಿ. ವಿಭಾಗದ ಅಧ್ಯಕ್ಷ ಜಯಣ್ಣ, ಜಿ.ವಿ.ಮಧುಗೌಡ, ಶಶಾಂಕ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...