Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಜನ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು(ಜು.19): ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿದಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಮುಖಕ್ಕೆ ಪೇಪರ್ ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದರು.

ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ  ಶಾಸಕರ ಹೊಟ್ಟೆಗೆ ಬೆಂಕಿ ಬಿದ್ದಂತಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು ಎನ್ನುವುದು ನನ್ನ ನಂಬಿಕೆ. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ.

ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ.

ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರೀಕ ನಡವಳಿಕೆಯಲ್ಲವೇ ಎಂದು ಪ್ರಶ್ನಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲೂ ಐಎಎಸ್ ಅಧಿಕಾರಿಗಳನ್ನೇ ಲೈಸನಿಂಗ್ ಅಧಿಕಾರಿಗಳನ್ನಾಗಿ ಮಾಡಿದ್ದರು. ಆದೆಲ್ಲಾ ಅವರಿಗೆ ಮರೆತುಹೋಯ್ತಾ ?

ದಿವಂಗತ ಅನಂತ್ ಕುಮಾರ್ ಅವರು ಬದುಕಿದ್ದಾಗ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು. ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು. ಇದು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದ್ದೂ ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ  ಮಾಡಿದ್ದಾರೆ. ಅವತ್ತು ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ಯಾವ ರೀತಿ ನಡೆಸಿಕೊಂಡಿದ್ದೇವೋ ಈಗಲೂ ಅದೇ ರೀತಿ ನಡೆದುಕೊಂಡಿದ್ದೇವೆ. ಇದು ಹಿಂದಿನಿಂದ ನಡೆದುಕೊಂಡಿರುವ ಪದ್ಧತಿ. ಅದರಂತೆ ನಡೆಯುತ್ತಿದೆ. ಆದರೆ ಇವತ್ತು ಬಿಜೆಪಿ ಸದಸ್ಯರು ಅದನ್ನೆಲ್ಲಾ ಮರೆತರಂತೆ ಡ್ರಾಮಾ ಆಡುತ್ತಾ, ಅಮಾನವೀಯವಾಗಿ ವರ್ತಿಸಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ. ನಾವೂ ವಿರೋಧ ಪಕ್ಷದಲ್ಲಿದ್ದೆವು. ಇಷ್ಟು ಅಸಹ್ಯವಾಗಿ ನಡೆದುಕೊಂಡಿದ್ದ ಸಣ್ಣ ಉದಾಹರಣೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!