Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ : ಕಾಂಗ್ರೆಸ್ ನಾಯಕರು ಏನಂದ್ರು..?

ಡಿಕೆ ಶಿವಕುಮಾರ್
---Advertisement---

 

ಬೆಳಗಾವಿ: ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಈ ಪ್ರತಿಭಟನೆಗೆ 25 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಬಿಜೆಪಿ ನಾಯಕರಲ್ಲಿ ಒಮ್ಮತ ಇಲ್ಲ ಎಂಬುದನ್ನು ತೋರಿಸುತ್ತಾ ಇದೆ. ಶಾಸಕಾಂಗ ಪಕ್ಷದ ನಾಯಕರಾಗಿ ಅಶೋಕ್ ರನ್ನ ಆಯ್ಕೆ ಮಾಡಿದ್ದಾರೆ. ಅವರ ಧ್ವನಿ ಆಚಾರ, ವಿಚಾರ, ಸರ್ಕಾರ ತಪ್ಪು ಮಾಡಿದೆಯಾ, ಬರಗಾಲದ ಸಮಸ್ಯೆ ಇದೆ. ನಮ್ಮ ಸರ್ಕಾರದ ವೈಫಲ್ಯ ಎತ್ತಿ ಹಿಡಿಯುವುದು, ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಚರ್ಚೆ ಮಾಡುವುದು ಸೇರಿದಂತೆ ಒಳಗೆ ಕುಳಿತು ಚರ್ಚೆ ಮಾಡುವುದನ್ನು ಬಿಟ್ಟು, ಪ್ರತಿಭಟನೆ ಮಾಡಿದರೆ ಯಾರ್ರೀ ಕೇಳುತ್ತಾರೆ. ಅವರು ಎಷ್ಟು ದುರ್ಬಲ  ಎಂಬುದಕ್ಕೆ ಇದು ಒಂದು ಕಾರಣ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸುವರ್ಣಸೌಧ ಕಟ್ಟಿಸಲಾಗಿದೆ ಎಂದಿದ್ದಾರೆ.

ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದ. ಯಾವುದರ ವಿರುದ್ಧ ಮಾಡುತ್ತಾರೆ‌. ಇವರ ಆದ್ಯತೆ ಏನು.  ಇಲ್ಲಿ ಬನ್ನಿ ಚರ್ಚೆ ಮಾಡುವುದಕ್ಕೆ ರೆಡಿ ಇದ್ದೀವಿ. ಸರ್ಕಾರ ಒಳಗೆ ಕುಳಿತಿದೆ. ಯಾರ ವಿರುದ್ಧ ಕುಳಿತುಕೊಳ್ಳುತ್ತಾರೆ ಯಡಿಯೂರಪ್ಪ ಅವರು. ಯತ್ನಾಳ್ ಅವರ ವಿರುದ್ಧವಾ..? ಬಿಜೆಪಿಯಲ್ಲಿ ಬಕೆಟ್ ರಾಜಕೀಯವಾಗಿದೆ. ಯಾರು ಯಾರಿಗೆ ಯಾವ ಬಕೆಟ್ ಹಿಡಿತಾ ಇದ್ದಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮಧು ಬಂಗಾರಪ್ಪ ಕೂಡ ಪ್ರತಿಕ್ರಿಯೆ ನೀಡಿದ್ದು, ಸದನದ ಒಳಗೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕು. ಅಧಿವೇಶನ ನಡೆಸುತ್ತಿರುವುದು ಯಾಕೆ..? ಬಾವಿಗಿಳಿದು ಪ್ರತಿಭಟನೆ ನಡೆಸಿದರೆ..? ಉತ್ತರ ಕರ್ನಾಟಕದ ಬಗ್ಗೆ ಮಾತನಾಡಿ ಅಂತ ಒತ್ತಾಯಿಸಬೇಕು. ಅದನ್ನು ಬಿಟ್ಟು ಪಬ್ಲಿಸಿಟಿಗೆ ಈ ರೀತಿ ಎಲ್ಲಾ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment