ಬಿಜೆಪಿ ದೇಶ ಮಾರಲು ಯತ್ನಿಸುತ್ತಿದೆ, ಅದನ್ನ ನಾವೂ ಉಳಿಸಬೇಕು : ಬೆಂಗಳೂರಿನಲ್ಲಿ ದೀದಿ ಆಕ್ರೋಶ

suddionenews
1 Min Read

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಬಿಜೆಪಿಯನ್ನು ಮಣಿಸಲೇಬೇಕೆಂದುಕೊಂಡು ವಿಪಕ್ಷಗಳೆಲ್ಲಾ ಒಂದಾಗಿವೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಎಲ್ಲಾ ದಲಿತ, ಅಲ್ಪಸಂಖ್ಯಾತ, ಹಿಂದೂ ಹಾಗೂ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ. ಇವತ್ತಿನ ಸಭೆ ಫಲಪ್ರದವಾಗಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ‌. ಸರ್ಕಾರಗಳನ್ನು ಬಿಕಳಿಸುವುದು, ಶಾಸಕರನ್ನು ಖರೀದಿಸುವುದು ಬಿಜೆಪಿಯ ಗುರಿಯಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ, ಇಂಡಿಯಾವನ್ನು ಚಾಲೆಂಜ್ ಮಾಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೇ ನಾವು ನಮ್ಮ ತಾಯಿ ನಾಡನ್ನು ಪ್ರೀತಿಸುತ್ತೇವೆ. ಜನರಿಗಾಗಿ, ದೇಶಕ್ಕಾಗಿ ದುಡಿಯುತ್ತಿದ್ದೇವೆ. ಮುಂದಿನ ನಮ್ಮ ಎಲ್ಲ ಹೋರಾಟಗಳು ಇಂಡಿಯಾ ಹೆಸರಲ್ಲಿ‌ ನಡೆಯಲಿವೆ. ನಮ್ಮನ್ನು ಎದುರಿಸಲು ಎನ್​ಡಿಎ ಮೈತ್ರಿ ಕೂಟಕ್ಕೆ ಸಾಧ್ಯವಾಗುತ್ತಾ ಎಂದು ಕಿಡಿ ಕಾಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *