Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ..!

---Advertisement---

 

 

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವುದು ಗೊತ್ತೆ ಇದೆ‌. ಈ ಮೈತ್ರಿ ಲೋಕಸಭೆಗೆ ಮಾತ್ರ ಸೀಮಿತ ಎನ್ನಲಾಗಿತ್ತು. ಆದರೆ ಈಗ ಮೈತ್ರಿ ಬೇರೆ ಬೇರೆ ಚುನಾವಣೆಗೂ ವಿಸ್ತರಣೆಯಾಗುತ್ತಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ತಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಯೋಚನೆ ಮಾಡಿದೆ.

ಫೆಬ್ರವರಿ 16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈ ಸಂಬಂಧ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಇಂದು ಮೊದಲ ಮೈತ್ರಿ ಸಭೆ ನಡೆಸಿದ್ದಾರೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಭೆ ಕರೆಯಲಾಗಿದೆ‌. ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಬಹುದಾದ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಚರ್ಚೆಯಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದು, ವಿಧಾನಪರಿಷತ್ ಗೆ ಸೀಮಿತವಾಗಿ ಎಲ್ಲರೂ ಚರ್ಚೆ ಮಾಡಿದ್ದೇವೆ. ಚರ್ಚೆಯ ವಿಚಾರ ದೆಹಲಿಗೆ ತಿಳಿಸ್ತೇವೆ. ಒಟ್ಟಾಗಿ ಚುನಾವಣೆ ಎದುರಿಸ್ತೇವೆ. ಎಂಎಲ್‌ಸಿ ಚುನಾವಣೆ ಬಂದಿದೆ. ಒಟ್ಟಾಗಿ ಎದುರಿಸ್ತೇವೆ‌ ಎಂದಿದ್ದಾರೆ.

ಜಂಟಿ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ಮುಂದೆ ಬರುವ ವಿಧಾನಪರಿಷತ್ ಚುನಾವಣೆಯ ಸಂಬಂಧ ಈ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಯಡಿಯೂರಪ್ಪ ಅವರ ಮನೆಯಲ್ಲಿ ಎರಡು ಪಕ್ಷದ ನಾಯಕರ ಜೊತೆಗೆ ಸಭೆ ನಡೆದಿದೆ. ಅಭ್ಯರ್ಥಿ ಆಯ್ಕೆಯ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಮುಂಬರುವ ಸ್ಥಳೀಯ ಚುನಾವಣೆಯಲ್ಲೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಇಂದಿನ ಚರ್ಚೆಯ ಬಗ್ಗೆ ಹೈಕಮಾಂಡ್ ನಾಯಕರಿಗೆ ಮಾಹಿತಿ ತಲುಪಿಸುವ ಕೆಲಸ ಮಾಡುತ್ತೇವೆ‌. ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ. ಮೊದಲು ಅದು ತೊಲಗಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment