Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲಿಯೇ ವಿಘ್ನ : ಅಂಥದ್ದೇನಾಯ್ತು ಗೊತ್ತಾ..?

---Advertisement---

ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಜ್ಜಾಗುತ್ತಿವೆ. ಆದರೆ ಈ ಮೈತ್ರಿ ಎರಡು ಪಕ್ಷದಲ್ಲೂ ಸಾಕಷ್ಟು ಜನರಿಗೆ ಇಷ್ಟವಿಲ್ಲ. ಇದೀಗ ಇನ್ನು ಅಧಿಕೃತವಾಗಿ ಮೀಟಿಂಗ್ ಆಗುವುದಕ್ಕೂ ಮುನ್ನವೇ ಆರಂಭಿಕ ವಿಘ್ನ ಎದುರಾದಂತೆ ಕಾಣುತ್ತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಪ್ರತ್ಯೇಕ ಸ್ಪರ್ಧೆಗೆ ಮುಂದಾಗಿದ್ದಾರೆ.

 

ಈ ಸಂಬಂಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಲೋಕಸಭಾ ಚುನಾವಣೆಗೆ ಮಾತ್ರ ಮೈತ್ರಿ ಮಾಡಿಕೊಳ್ಳಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಗೆ ಬೆಂಬಲ ನೀಡುವುದಿಲ್ಲ. ಬಿಜೆಪಿಯಲ್ಲಿ 12 ಮಂದಿ ಆಕಾಂಕ್ಷಿಗಳಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಒಮ್ಮೆಯೂ ಗೆದ್ದಿಲ್ಲ. ಹೀಗಾಗಿ ಬಿಜೆಪಿಯ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಲಿದ್ದೇವೆ ಎಂದಿದ್ದಾರೆ.

 

ಈ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗಾಗಿ ಶ್ರಮಿಸುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಮೂಲಕ ಎರಡು ಪಕ್ಷಗಳ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರ. ಅದರ ಮಧ್ಯೆ ಯಾವುದೇ ಚುನಾವಣೆ ಬಂದರೂ ಅದಕ್ಕೆ ಬೆಂಬಲ ಸಿಗುವುದು ಕಷ್ಟ ಎಂಬುದನ್ನೇ ತೋರಿಸುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...